<p><strong>ಬೆಳಗಾವಿ</strong>: ‘ಕೋವಿಡ್–19 ಭೀತಿಯಲ್ಲಿರುವ ಎಲ್ಲ ನಾಗರಿಕರಿಗೆ ರೋಗನಿರೋಧಕ ಚಚ್ಚುಮದ್ದು (ಕೋವಿಶೀಲ್ಡ್ ಲಸಿಕೆ) ಸಂಜೀವಿನಿ ಇದ್ದಂತೆ’ ಎಂದು ಯುಎಸ್ಎಂ–ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ ಹೇಳಿದರು.</p>.<p>ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ನಡೆದ ಸಾರ್ವಜನಿಕರಿಗೆ ಕೊವಿಶೀಲ್ಡ್ ರೋಗನಿರೋಧಕ ಚುಚ್ಚುಮದ್ದು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವರ್ಷದಿಂದ ಭೀತಿಯಲ್ಲಿ ಬೆಂದಿರುವ ನಾಗರಿಕರಲ್ಲಿರುವ ಕೊರೊನಾ ಆತಂಕ ಹೋಗಲಾಡಿಸಲು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ, ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ಲಸಿಕೆ ಕಾರ್ಯಕ್ರಮ ಉದ್ಘಾಟಿಸಲಾಗಿದೆ. ಈ ಮೂಲಕ ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಆರೋಗ್ಯ ಇಲಾಖೆಯು ಸದಾ ಮುಂಚೂಣಿಯಲ್ಲಿರುತ್ತದೆ ಎನ್ನುವುದು ಸಾಬೀತಾಗಿದೆ’ ಎಂದರು.</p>.<p>ರೋಗನಿರೋಧಕ ಚುಚ್ಚುಮದ್ದು ಸ್ವೀಕರಿಸಿದ ಬೆಳಗಾವಿ ಜಿಲ್ಲಾ ಹಿರಿಯ ನಾಗರಿಕರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ ಕುಲಕರ್ಣಿ, ‘84 ವರ್ಷದವನಾದ ನಾನು ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಆರೋಗ್ಯವಾಗಿದ್ದೇನೆ. ಈ ಚುಚ್ಚುಮದ್ದು ಸುರಕ್ಷಿತವಾಗಿದ್ದು ನಾಗರಿಕರು ಯಾವುದೇ ರೀತಿಯ ಹಿಂಜರಿಕೆ ಇಲ್ಲದೇ ಪಡೆಯಬಹುದು’ ಎಂದು ತಿಳಿಸಿದರು.</p>.<p>ಆಸ್ಪತ್ರೆಯು ನಿರ್ದೇಶಕ ಡಾ.ಎಸ್.ಸಿ. ಧಾರವಾಡ, ‘ಸೋಂಕಿನ ಭೀತಿಯಲ್ಲಿರುವ ನಾಗರಿಕರ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರವು ಇಟ್ಟಿರುವ ಹೆಜ್ಜೆಯು ನಿಜಕ್ಕೂ ಶ್ಲಾಘನೀಯವಾಗಿದೆ. ನಮ್ಮ ಆಸ್ಪತ್ರೆಯನ್ನು ಕೋವಿಶೀಲ್ಡ್ ರೋಗನಿರೋಧಕ ಚುಚ್ಚುಮದ್ದು ಕೇಂದ್ರವನ್ನಾಗಿ ಗುರುತಿಸಿದ್ದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಈ ಚುಚ್ಚುಮದ್ದು ಪಡೆಯಲು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ವಿಭಾಗದ ಮೊ:9538701437, 8550887777 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.</p>.<p>ಹಿರಿಯರಾದ ಪಾರ್ವತಿ ರಾಜಶೇಖರ, ಕಲ್ಪನಾ ಧಾರವಾಡ, ಶೋಭಾ ಕುಲಕರ್ಣಿ ಸೇರಿದಂತೆ 20 ಮಂದಿಗೆ ಚುಚ್ಚುಮದ್ದು ನೀಡಲಾಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸಿ. ಮಾಸ್ತಿಹೊಳಿ, ಆಸ್ಪತ್ರೆಯ ಹಿರಿಯ ವೈದ್ಯ ಡಾ.ಬಿ.ಎಸ್. ಮಹಾಂತಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕೋವಿಡ್–19 ಭೀತಿಯಲ್ಲಿರುವ ಎಲ್ಲ ನಾಗರಿಕರಿಗೆ ರೋಗನಿರೋಧಕ ಚಚ್ಚುಮದ್ದು (ಕೋವಿಶೀಲ್ಡ್ ಲಸಿಕೆ) ಸಂಜೀವಿನಿ ಇದ್ದಂತೆ’ ಎಂದು ಯುಎಸ್ಎಂ–ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ ಹೇಳಿದರು.</p>.<p>ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ನಡೆದ ಸಾರ್ವಜನಿಕರಿಗೆ ಕೊವಿಶೀಲ್ಡ್ ರೋಗನಿರೋಧಕ ಚುಚ್ಚುಮದ್ದು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವರ್ಷದಿಂದ ಭೀತಿಯಲ್ಲಿ ಬೆಂದಿರುವ ನಾಗರಿಕರಲ್ಲಿರುವ ಕೊರೊನಾ ಆತಂಕ ಹೋಗಲಾಡಿಸಲು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ, ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಏಕಕಾಲದಲ್ಲಿ ಲಸಿಕೆ ಕಾರ್ಯಕ್ರಮ ಉದ್ಘಾಟಿಸಲಾಗಿದೆ. ಈ ಮೂಲಕ ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಆರೋಗ್ಯ ಇಲಾಖೆಯು ಸದಾ ಮುಂಚೂಣಿಯಲ್ಲಿರುತ್ತದೆ ಎನ್ನುವುದು ಸಾಬೀತಾಗಿದೆ’ ಎಂದರು.</p>.<p>ರೋಗನಿರೋಧಕ ಚುಚ್ಚುಮದ್ದು ಸ್ವೀಕರಿಸಿದ ಬೆಳಗಾವಿ ಜಿಲ್ಲಾ ಹಿರಿಯ ನಾಗರಿಕರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ ಕುಲಕರ್ಣಿ, ‘84 ವರ್ಷದವನಾದ ನಾನು ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಆರೋಗ್ಯವಾಗಿದ್ದೇನೆ. ಈ ಚುಚ್ಚುಮದ್ದು ಸುರಕ್ಷಿತವಾಗಿದ್ದು ನಾಗರಿಕರು ಯಾವುದೇ ರೀತಿಯ ಹಿಂಜರಿಕೆ ಇಲ್ಲದೇ ಪಡೆಯಬಹುದು’ ಎಂದು ತಿಳಿಸಿದರು.</p>.<p>ಆಸ್ಪತ್ರೆಯು ನಿರ್ದೇಶಕ ಡಾ.ಎಸ್.ಸಿ. ಧಾರವಾಡ, ‘ಸೋಂಕಿನ ಭೀತಿಯಲ್ಲಿರುವ ನಾಗರಿಕರ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರವು ಇಟ್ಟಿರುವ ಹೆಜ್ಜೆಯು ನಿಜಕ್ಕೂ ಶ್ಲಾಘನೀಯವಾಗಿದೆ. ನಮ್ಮ ಆಸ್ಪತ್ರೆಯನ್ನು ಕೋವಿಶೀಲ್ಡ್ ರೋಗನಿರೋಧಕ ಚುಚ್ಚುಮದ್ದು ಕೇಂದ್ರವನ್ನಾಗಿ ಗುರುತಿಸಿದ್ದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಈ ಚುಚ್ಚುಮದ್ದು ಪಡೆಯಲು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ವಿಭಾಗದ ಮೊ:9538701437, 8550887777 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.</p>.<p>ಹಿರಿಯರಾದ ಪಾರ್ವತಿ ರಾಜಶೇಖರ, ಕಲ್ಪನಾ ಧಾರವಾಡ, ಶೋಭಾ ಕುಲಕರ್ಣಿ ಸೇರಿದಂತೆ 20 ಮಂದಿಗೆ ಚುಚ್ಚುಮದ್ದು ನೀಡಲಾಯಿತು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸಿ. ಮಾಸ್ತಿಹೊಳಿ, ಆಸ್ಪತ್ರೆಯ ಹಿರಿಯ ವೈದ್ಯ ಡಾ.ಬಿ.ಎಸ್. ಮಹಾಂತಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>