ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ವಿ. ರಾಹುಲ್, ‘ಕೊರೊನಾ ತಡೆಗೆ ಲಸಿಕೆಯು ಸಂಜೀವಿನಿಯಾಗಿದೆ. ಬ್ಯಾಂಕ್ ನೌಕರರು ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸಬೇಕಾಗಿರುವುದರಿಂದ ಆದ್ಯತೆಯ ಮೇರೆಗೆ ಅವರಿಗೆ ಲಸಿಕೆ ನೀಡಲಾಗುತ್ತಿದೆ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಬಿಡಬಾರದು. ಕೈಗಳ ಸ್ವಚ್ಛತೆಗೂ ಗಮನ ನೀಡಬೇಕು’ ಎಂದು ಸಲಹೆ ನೀಡಿದರು.