ನಗರದ ಜಿಲ್ಲಾಸ್ಪತ್ರೆ, ವಂಟಮೂರಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಅಥಣಿ ಹಾಗೂ ಹುಕ್ಕೇರಿ ತಾಲ್ಲೂಕು ಆಸ್ಪತ್ರೆಗಳು, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಖಾನಾಪುರ, ರಾಯಬಾಗ, ರಾಮದುರ್ಗ ಹಾಗೂ ಸವದತ್ತಿ ಸರ್ಕಾರಿ ಆಸ್ಪತ್ರೆಗಳು ಹಾಗೂ ಗೋಕಾಕ ತಾಲ್ಲೂಕಿನ ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಭಿಯಾನ ನಡೆಯಲಿದೆ. ಪ್ರತಿ ಕೇಂದ್ರದಲ್ಲೂ ದಿನಕ್ಕೆ 100 ಮಂದಿಗೆ ಲಸಿಕೆ ನೀಡಲಾಗುವುದು. ಮೊದಲ ಹಂತದಲ್ಲಿ ಆರೋಗ್ಯ ಸೇವಾ ಸಿಬ್ಬಂದಿಯನ್ನು ಪರಿಗಣಿಸಲಾಗುತ್ತಿದೆ. ಅವರಿಗೆ ಕೇಂದ್ರದಿಂದ ಪೂರೈಕೆಯಾಗಿರುವ ‘ಕೋವಿಶೀಲ್ಡ್’ ಲಸಿಕೆ ಕೊಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.