<p><strong>ಬೆಳಗಾವಿ:</strong> ‘ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಕೋವಿಡ್ ಕಾರಣದಿಂದಾಗಿ ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆಯೋಜಿಸಿದೆ. ಇದಕ್ಕೆ ಕೊರೊನಾ ಅಡ್ಡಿ ಆಗುವುದಿಲ್ಲವೇ?’ ಎಂದು ಶಾಸಕಿ ಹಾಗೂ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ ಕೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುವರ್ಣ ವಿಧಾನಸೌಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯದ ಸಂದೇಶಗಳನ್ನು ಹಾಕಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳದೆ ಇರುವುದು ಇದಕ್ಕೆ ಕಾರಣ. ಕಳೆದ ವರ್ಷವೂ ಇಲ್ಲಿ ಅಧಿವೇಶನ ನಡೆಸಿಲ್ಲ. ಈ ಬಾರಿಯೂ ಇಲ್ಲವೆಂದು ಸರ್ಕಾರ ಹೇಳಿದೆ. ಇದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.</p>.<p>‘ಎರಡು ಬಾರಿ ಪ್ರವಾಹ ಉಂಟಾಗಿ ಅಪಾರ ನಷ್ಟವಾದರೂ ಸರ್ಕಾರ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ. ಕೇಂದ್ರವೂ ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬರಬೇಕಾದ ಜಿಎಸ್ಟಿ ಹಣವನ್ನೂ ಕೊಟ್ಟಿಲ್ಲ. ಹೀಗಿರುವಾಗ ಇಲ್ಲಿ ಕಾರ್ಯಕಾರಿಣಿ ನಡೆಸುವುದು ರಾಜಕೀಯ ಗಿಮಿಕ್ ಆಗಬಾರದು’ ಎಂದರು.</p>.<p>‘ಪ್ರವಾಹ ಪರಿಹಾರಕ್ಕೆ ಕೋವಿಡ್ ಕಾರಣದಿಂದ ಅನುದಾನದ ಕೊರತೆ ಎನ್ನುವ ಸರ್ಕಾರ, ಬೇರೆಯದಕ್ಕೆಲ್ಲ ಅನಗತ್ಯವಾಗಿ ಖರ್ಚು ಮಾಡುತ್ತಿದೆ. ಸರ್ಕಾರದ ದೃಷ್ಟಿ ಕೇವಲ ಚುನಾವಣೆಯತ್ತ ಮಾತ್ರವೇ ಇದೆ. ಜನರ ಹಿತವನ್ನು ಸಂಪೂರ್ಣ ಕಡೆಗಣಿಸಿದೆ’ ಎಂದು ದೂರಿದರು.</p>.<p>‘ಪ್ರವಾಹದಿಂದಾಗಿ ನೂರಾರು ಕೆರೆ, ರಸ್ತೆ, ಸೇತುವೆಗಳು ಹಾಳಾಗಿವೆ. ಉತ್ತರ ಕರ್ನಾಟಕದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಆದರೆ, ದುರಸ್ತಿಗೆ ಸರ್ಕಾರ ಗಮನವನ್ನೇ ಹರಿಸುತ್ತಿಲ್ಲ. ನನ್ನ ಗ್ರಾಮೀಣ ಕ್ಷೇತ್ರದಲ್ಲೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಿದೆ. ಹೋರಾಟ ಮಾಡಿ ಹಣ ತರುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಕೋವಿಡ್ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದವರಿಗೆ ನೆರವು ನೀಡುವುದಾಗಿ ಸರ್ಕಾರ ಮಾಡಿದ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಯಾರಿಗೂ ನೆರವು ಸಿಕ್ಕಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಚರ್ಚಿಸಲು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಬೇಕಿತ್ತು. ಆದರೆ, ಸರ್ಕಾರ ಕೇವಲ ಸಂಪುಟ ವಿಸ್ತರಣೆಯಲ್ಲೇ ಹಾಗೂ ವಿವಾದದಲ್ಲೇ ಕಾಲ ಕಳೆಯುತ್ತಿದೆ’ ಎಂದು ಟೀಕಿಸಿದರು.</p>.<p>‘ಸಾಂಬ್ರಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಕೃಷ್ಣ ಆನಗೋಳಕರ ಕಾಂಗ್ರೆಸ್ ಪರ ದುಡಿದಿಲ್ಲ. ಹೋದ ಚುನಾವಣೆಯಲ್ಲೂ ನನ್ನ ವಿರುದ್ಧವೇ ಕೆಲಸ ಮಾಡಿದ್ದರು’ ಎಂದು ಹೇಳಿದರು.</p>.<p>‘ರಾಜಕಾರಣದಲ್ಲಿ ಷಡ್ಯಂತ್ರ ರೂಪಿಸುವುದು ಸಾಮಾನ್ಯ. ಏಕಾಂಗಿ ಹೋರಾಟ ನನಗೇನೂ ಹೊಸದಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಕೋವಿಡ್ ಕಾರಣದಿಂದಾಗಿ ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆಯೋಜಿಸಿದೆ. ಇದಕ್ಕೆ ಕೊರೊನಾ ಅಡ್ಡಿ ಆಗುವುದಿಲ್ಲವೇ?’ ಎಂದು ಶಾಸಕಿ ಹಾಗೂ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ ಕೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುವರ್ಣ ವಿಧಾನಸೌಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯದ ಸಂದೇಶಗಳನ್ನು ಹಾಕಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳದೆ ಇರುವುದು ಇದಕ್ಕೆ ಕಾರಣ. ಕಳೆದ ವರ್ಷವೂ ಇಲ್ಲಿ ಅಧಿವೇಶನ ನಡೆಸಿಲ್ಲ. ಈ ಬಾರಿಯೂ ಇಲ್ಲವೆಂದು ಸರ್ಕಾರ ಹೇಳಿದೆ. ಇದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.</p>.<p>‘ಎರಡು ಬಾರಿ ಪ್ರವಾಹ ಉಂಟಾಗಿ ಅಪಾರ ನಷ್ಟವಾದರೂ ಸರ್ಕಾರ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ. ಕೇಂದ್ರವೂ ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬರಬೇಕಾದ ಜಿಎಸ್ಟಿ ಹಣವನ್ನೂ ಕೊಟ್ಟಿಲ್ಲ. ಹೀಗಿರುವಾಗ ಇಲ್ಲಿ ಕಾರ್ಯಕಾರಿಣಿ ನಡೆಸುವುದು ರಾಜಕೀಯ ಗಿಮಿಕ್ ಆಗಬಾರದು’ ಎಂದರು.</p>.<p>‘ಪ್ರವಾಹ ಪರಿಹಾರಕ್ಕೆ ಕೋವಿಡ್ ಕಾರಣದಿಂದ ಅನುದಾನದ ಕೊರತೆ ಎನ್ನುವ ಸರ್ಕಾರ, ಬೇರೆಯದಕ್ಕೆಲ್ಲ ಅನಗತ್ಯವಾಗಿ ಖರ್ಚು ಮಾಡುತ್ತಿದೆ. ಸರ್ಕಾರದ ದೃಷ್ಟಿ ಕೇವಲ ಚುನಾವಣೆಯತ್ತ ಮಾತ್ರವೇ ಇದೆ. ಜನರ ಹಿತವನ್ನು ಸಂಪೂರ್ಣ ಕಡೆಗಣಿಸಿದೆ’ ಎಂದು ದೂರಿದರು.</p>.<p>‘ಪ್ರವಾಹದಿಂದಾಗಿ ನೂರಾರು ಕೆರೆ, ರಸ್ತೆ, ಸೇತುವೆಗಳು ಹಾಳಾಗಿವೆ. ಉತ್ತರ ಕರ್ನಾಟಕದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಆದರೆ, ದುರಸ್ತಿಗೆ ಸರ್ಕಾರ ಗಮನವನ್ನೇ ಹರಿಸುತ್ತಿಲ್ಲ. ನನ್ನ ಗ್ರಾಮೀಣ ಕ್ಷೇತ್ರದಲ್ಲೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಿದೆ. ಹೋರಾಟ ಮಾಡಿ ಹಣ ತರುತ್ತೇನೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಕೋವಿಡ್ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದವರಿಗೆ ನೆರವು ನೀಡುವುದಾಗಿ ಸರ್ಕಾರ ಮಾಡಿದ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಯಾರಿಗೂ ನೆರವು ಸಿಕ್ಕಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಚರ್ಚಿಸಲು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಬೇಕಿತ್ತು. ಆದರೆ, ಸರ್ಕಾರ ಕೇವಲ ಸಂಪುಟ ವಿಸ್ತರಣೆಯಲ್ಲೇ ಹಾಗೂ ವಿವಾದದಲ್ಲೇ ಕಾಲ ಕಳೆಯುತ್ತಿದೆ’ ಎಂದು ಟೀಕಿಸಿದರು.</p>.<p>‘ಸಾಂಬ್ರಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಕೃಷ್ಣ ಆನಗೋಳಕರ ಕಾಂಗ್ರೆಸ್ ಪರ ದುಡಿದಿಲ್ಲ. ಹೋದ ಚುನಾವಣೆಯಲ್ಲೂ ನನ್ನ ವಿರುದ್ಧವೇ ಕೆಲಸ ಮಾಡಿದ್ದರು’ ಎಂದು ಹೇಳಿದರು.</p>.<p>‘ರಾಜಕಾರಣದಲ್ಲಿ ಷಡ್ಯಂತ್ರ ರೂಪಿಸುವುದು ಸಾಮಾನ್ಯ. ಏಕಾಂಗಿ ಹೋರಾಟ ನನಗೇನೂ ಹೊಸದಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>