<p><strong>ಬೆಳಗಾವಿ</strong>: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್ನಲ್ಲಿ ಐಸೊಲೇಷನ್ ಕೇಂದ್ರ ತೆರೆದಿದೆ.</p>.<p>‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಕೇಂದ್ರದಲ್ಲಿ ಉಳಿಯುವ ರೋಗಿಗಳು ಹಾಗೂ ಸಂಬಂಧಿಕರ ನಡುವೆ ಸಂಪರ್ಕ ಕಲ್ಪಿಸಲು ಜೂಮ್ ಆ್ಯಪ್ ಬಳಸಲಾಗುತ್ತದೆ. ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಆ್ಯಪ್ ಬಳಸುವ ವ್ಯವಸ್ಥೆ ಇದೆ. ಮನೆಯವರ ಜೊತೆ ನಿತ್ಯವೂ ಮಾತನಾಡಬಹುದು. ಈ ಮೂಲಕ ರೋಗಿ ಹಾಗೂ ಅವರ ಸಂಬಂಧಿಕರ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ದಾಖಲಾಗುವವರಿಗೆ ಆರೋಗ್ಯಯುತ ಹಾಗೂ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುವುದು. ಸ್ಥೈರ್ಯ ಕುಂದದಂತೆ ನೋಡಿಕೊಳ್ಳಲು ಯೋಗಾಸನ ಹೇಳಿಕೊಡಲಾಗುವುದು’ ಎಂದು ಮಾಹಿತಿ ನೀಡಿದೆ.</p>.<p>‘ತಜ್ಞ ವೈದ್ಯರಿಂದ ದಿನದ 24 ಗಂಟೆಗಳ ಕಾಲ ಆರೈಕೆ ವ್ಯವಸ್ಥೆ ಮಾಡಲಾಗುತ್ತದೆ. ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆಂಬುಲೆನ್ಸ್ ವ್ಯವಸ್ಥೆ ಇದೆ. ಆಮ್ಲಜನಕ ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಕಡಿಮೆ ಗುಣಲಕ್ಷಣಗಳು ಹೊಂದಿರುವವರನ್ನು ಮಾತ್ರವೇ ದಾಖಲಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ: 8197671083 /9986631942 ಸಂಪರ್ಕಿಸಬಹುದು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್ನಲ್ಲಿ ಐಸೊಲೇಷನ್ ಕೇಂದ್ರ ತೆರೆದಿದೆ.</p>.<p>‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಕೇಂದ್ರದಲ್ಲಿ ಉಳಿಯುವ ರೋಗಿಗಳು ಹಾಗೂ ಸಂಬಂಧಿಕರ ನಡುವೆ ಸಂಪರ್ಕ ಕಲ್ಪಿಸಲು ಜೂಮ್ ಆ್ಯಪ್ ಬಳಸಲಾಗುತ್ತದೆ. ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಆ್ಯಪ್ ಬಳಸುವ ವ್ಯವಸ್ಥೆ ಇದೆ. ಮನೆಯವರ ಜೊತೆ ನಿತ್ಯವೂ ಮಾತನಾಡಬಹುದು. ಈ ಮೂಲಕ ರೋಗಿ ಹಾಗೂ ಅವರ ಸಂಬಂಧಿಕರ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ದಾಖಲಾಗುವವರಿಗೆ ಆರೋಗ್ಯಯುತ ಹಾಗೂ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುವುದು. ಸ್ಥೈರ್ಯ ಕುಂದದಂತೆ ನೋಡಿಕೊಳ್ಳಲು ಯೋಗಾಸನ ಹೇಳಿಕೊಡಲಾಗುವುದು’ ಎಂದು ಮಾಹಿತಿ ನೀಡಿದೆ.</p>.<p>‘ತಜ್ಞ ವೈದ್ಯರಿಂದ ದಿನದ 24 ಗಂಟೆಗಳ ಕಾಲ ಆರೈಕೆ ವ್ಯವಸ್ಥೆ ಮಾಡಲಾಗುತ್ತದೆ. ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆಂಬುಲೆನ್ಸ್ ವ್ಯವಸ್ಥೆ ಇದೆ. ಆಮ್ಲಜನಕ ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಕಡಿಮೆ ಗುಣಲಕ್ಷಣಗಳು ಹೊಂದಿರುವವರನ್ನು ಮಾತ್ರವೇ ದಾಖಲಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ: 8197671083 /9986631942 ಸಂಪರ್ಕಿಸಬಹುದು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>