<p><strong>ಬೆಳಗಾವಿ</strong>: ಜಾರ್ಖಂಡ್ ಯಾತ್ರಾಸ್ಥಳದಿಂದ ಮರಳಿ ಬಂದಿದ್ದ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 75 ವರ್ಷದ ವ್ಯಕ್ತಿಗೆ (ಪಿ–1687) ಕೋವಿಡ್–19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿತರಾದವರ ಸಂಖ್ಯೆ 120ಕ್ಕೆ ತಲುಪಿದಂತಾಗಿದೆ.</p>.<p>ಯಾತ್ರಾಸ್ಥಳಕ್ಕೆ ಹೋಗಿಬಂದಿದ್ದ ಇಂಗಳಿ ಗ್ರಾಮದ 6 ಜನರನ್ನು ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಜಾರ್ಖಂಡ್ ಯಾತ್ರಾಸ್ಥಳಕ್ಕೆ ಜಿಲ್ಲೆಯಿಂದ ಹಲವರು ತೆರಳಿದ್ದರು. ಲಾಕ್ಡೌನ್ ಸಡಿಲಿಕೆಗೊಂಡ ನಂತರ ವಾಪಸ್ಸಾಗಿದ್ದಾರೆ. ಗುರುವಾರ ಕಾಗವಾಡದ ಮೂರು ಜನರಲ್ಲಿ ಸೋಂಕು ದೃಢಪಟ್ಟಿತ್ತು. ಈಗ ಮತ್ತೊಬ್ಬರಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟು ಯಾತ್ರಾಸ್ಥಳದಿಂದ ಮರಳಿ ಬಂದ ನಾಲ್ಕು ಜನರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಠ್ಠಲ ಶಿಂದೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ತಹಶೀಲ್ದಾರ್ ಎಸ್.ಎಸ್ ಸಂಪಗಾಂವಿ ಸ್ಥಳಕ್ಕೆ ಭೇಟಿ ನೀಡಿ, ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಸೋಂಕಿತ ವ್ಯಕ್ತಿಯನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>314 ಬಾಕಿ:</strong>ಹೊರರಾಜ್ಯಗಳಿಂದ ಬರುತ್ತಿರುವವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಸುಮಾರು 314 ವರದಿಗಳ ಫಲಿತಾಂಶ ಬರುವುದು ಬಾಕಿ ಇದೆ.</p>.<p><strong>ಬೆಂಗಳೂರಿನಿಂದ ಆಗಮಿಸಿದ ರೈಲು:</strong>ಎರಡು ತಿಂಗಳ ಲಾಕ್ಡೌನ್ ನಂತರ ರೈಲು ಪ್ರಯಾಣ ಶುಕ್ರವಾರ ಆರಂಭಗೊಂಡಿತು. ಬೆಂಗಳೂರಿನಿಂದ ಬೆಳಿಗ್ಗೆ ಹೊರಟ ರೈಲು ಬೆಳಗಾವಿಗೆ ಸಂಜೆ 6.50ಕ್ಕೆ ಬಂದಿತು. ಸುಮಾರು 170 ಪ್ರಯಾಣಿಕರು ಬಂದಿಳಿದರು.</p>.<p>ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ದೇಹದ ಉಷ್ಣಾಂಶವನ್ನು ತಪಾಸಣೆಗೆ ಒಳಪಡಿಸಲಾಯಿತು. ಬಿಜೆಪಿಯ ಮಹಾನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಮುರುಗೇಶ ಪಾಟೀಲ ಅವರು ಪ್ರತಿಯೊಬ್ಬರ ಪ್ರಯಾಣಿಕರಿಗೆ ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಿದರು. ಪ್ರಯಾಣದ ನಂತರ ರೈಲನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಾರ್ಖಂಡ್ ಯಾತ್ರಾಸ್ಥಳದಿಂದ ಮರಳಿ ಬಂದಿದ್ದ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 75 ವರ್ಷದ ವ್ಯಕ್ತಿಗೆ (ಪಿ–1687) ಕೋವಿಡ್–19 ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕಿತರಾದವರ ಸಂಖ್ಯೆ 120ಕ್ಕೆ ತಲುಪಿದಂತಾಗಿದೆ.</p>.<p>ಯಾತ್ರಾಸ್ಥಳಕ್ಕೆ ಹೋಗಿಬಂದಿದ್ದ ಇಂಗಳಿ ಗ್ರಾಮದ 6 ಜನರನ್ನು ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಜಾರ್ಖಂಡ್ ಯಾತ್ರಾಸ್ಥಳಕ್ಕೆ ಜಿಲ್ಲೆಯಿಂದ ಹಲವರು ತೆರಳಿದ್ದರು. ಲಾಕ್ಡೌನ್ ಸಡಿಲಿಕೆಗೊಂಡ ನಂತರ ವಾಪಸ್ಸಾಗಿದ್ದಾರೆ. ಗುರುವಾರ ಕಾಗವಾಡದ ಮೂರು ಜನರಲ್ಲಿ ಸೋಂಕು ದೃಢಪಟ್ಟಿತ್ತು. ಈಗ ಮತ್ತೊಬ್ಬರಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟು ಯಾತ್ರಾಸ್ಥಳದಿಂದ ಮರಳಿ ಬಂದ ನಾಲ್ಕು ಜನರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಠ್ಠಲ ಶಿಂದೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ತಹಶೀಲ್ದಾರ್ ಎಸ್.ಎಸ್ ಸಂಪಗಾಂವಿ ಸ್ಥಳಕ್ಕೆ ಭೇಟಿ ನೀಡಿ, ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಸೋಂಕಿತ ವ್ಯಕ್ತಿಯನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>314 ಬಾಕಿ:</strong>ಹೊರರಾಜ್ಯಗಳಿಂದ ಬರುತ್ತಿರುವವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಸುಮಾರು 314 ವರದಿಗಳ ಫಲಿತಾಂಶ ಬರುವುದು ಬಾಕಿ ಇದೆ.</p>.<p><strong>ಬೆಂಗಳೂರಿನಿಂದ ಆಗಮಿಸಿದ ರೈಲು:</strong>ಎರಡು ತಿಂಗಳ ಲಾಕ್ಡೌನ್ ನಂತರ ರೈಲು ಪ್ರಯಾಣ ಶುಕ್ರವಾರ ಆರಂಭಗೊಂಡಿತು. ಬೆಂಗಳೂರಿನಿಂದ ಬೆಳಿಗ್ಗೆ ಹೊರಟ ರೈಲು ಬೆಳಗಾವಿಗೆ ಸಂಜೆ 6.50ಕ್ಕೆ ಬಂದಿತು. ಸುಮಾರು 170 ಪ್ರಯಾಣಿಕರು ಬಂದಿಳಿದರು.</p>.<p>ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ದೇಹದ ಉಷ್ಣಾಂಶವನ್ನು ತಪಾಸಣೆಗೆ ಒಳಪಡಿಸಲಾಯಿತು. ಬಿಜೆಪಿಯ ಮಹಾನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಮುರುಗೇಶ ಪಾಟೀಲ ಅವರು ಪ್ರತಿಯೊಬ್ಬರ ಪ್ರಯಾಣಿಕರಿಗೆ ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಿದರು. ಪ್ರಯಾಣದ ನಂತರ ರೈಲನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>