‘ಈಗಾಗಲೆ ಬಿರುಕು ಕಾಣಿಸಿಕೊಂಡಿರುವುದು ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ. ಗುಣಮಟ್ಟದ ಇಟ್ಟಿಗೆ, ಸಿಮೆಂಟ್, ಮರಳು ಉಪಯೋಗಿಸಿದ್ದರೆ ಹೀಗಾಗುತ್ತಿರಲಿಲ್ಲ. ಪರೀಕ್ಷೆ ನಡೆಸಿ ಗುಣಮಟ್ಟ ಕುರಿತ ವರದಿಯನ್ನು ಗ್ರಾಮ ಸಭೆಯಲ್ಲಿಡಬೇಕು. ಗೋಡೆ ಬಿರುಕು ಬಿಟ್ಟಿರುವುದಕ್ಕೆ ಕಾರಣವಾರ ನಿರ್ಮಿತ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಹಿ ಸಂಗ್ರಹ ಮಾಡಿ ದೂರು ನೀಡುವುದು ಮಾತ್ರವಲ್ಲದೆ, ಕ್ರಮಕ್ಕಾಗಿ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.