<p><strong>ಬೆಳಗಾವಿ:</strong> ‘ಅಪರಾಧ ಚಟುವಟಿಕೆಗಳನ್ನು ತಡೆಯಲು ಸಮಾಜದ ಎಲ್ಲರ ಸಹಕಾರ ಅಗತ್ಯ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.</p>.<p>ಅಪರಾಧ ತಡೆ ಮಾಸಾಚರಣೆ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರು, ವೈದ್ಯರು, ನಗರಪಾಲಿಕೆ ಅಧಿಕಾರಿ–ಸಿಬ್ಬಂದಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿ–ಸಿಬ್ಬಂದಿಗೆ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೊಲೀಸ್ ಇಲಾಖೆಯಿಂದ ಮಾತ್ರವೇ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುವುದಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸಹಕಾರ ಕೊಡಬೇಕಾಗುತ್ತದೆ. ಹೀಗಾಗಿ, ಜಾಗೃತಿ ಮೂಡಿಸುವ ಚಟುವಟಿಕೆಯ ಭಾಗವಾಗಿ ಕ್ರಿಕೆಟ್ ಟೂರ್ನಿ ನಡೆಸಲಾಗುತ್ತಿದೆ’ ಎಂದರು.</p>.<p>‘ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ’ ಎಂದು ಹೇಳಿದರು.</p>.<p>‘ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ’ ಎಂದರು.</p>.<p>ಎಎಸ್ಪಿ ಅಮರನಾಥ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಪತ್ರಕರ್ತ ದಿಲೀಪ್ ಕುರಂದವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಅಪರಾಧ ಚಟುವಟಿಕೆಗಳನ್ನು ತಡೆಯಲು ಸಮಾಜದ ಎಲ್ಲರ ಸಹಕಾರ ಅಗತ್ಯ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.</p>.<p>ಅಪರಾಧ ತಡೆ ಮಾಸಾಚರಣೆ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರು, ವೈದ್ಯರು, ನಗರಪಾಲಿಕೆ ಅಧಿಕಾರಿ–ಸಿಬ್ಬಂದಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿ–ಸಿಬ್ಬಂದಿಗೆ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೊಲೀಸ್ ಇಲಾಖೆಯಿಂದ ಮಾತ್ರವೇ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುವುದಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸಹಕಾರ ಕೊಡಬೇಕಾಗುತ್ತದೆ. ಹೀಗಾಗಿ, ಜಾಗೃತಿ ಮೂಡಿಸುವ ಚಟುವಟಿಕೆಯ ಭಾಗವಾಗಿ ಕ್ರಿಕೆಟ್ ಟೂರ್ನಿ ನಡೆಸಲಾಗುತ್ತಿದೆ’ ಎಂದರು.</p>.<p>‘ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ’ ಎಂದು ಹೇಳಿದರು.</p>.<p>‘ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ’ ಎಂದರು.</p>.<p>ಎಎಸ್ಪಿ ಅಮರನಾಥ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಪತ್ರಕರ್ತ ದಿಲೀಪ್ ಕುರಂದವಾಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>