‘ಪವಿತ್ರಾ ಮತ್ತು ಪ್ರವೀಣ ಪರಸ್ಪರ ಪ್ರೀತಿಸುತ್ತಿದ್ದರು. ವಿವಾಹಕ್ಕೂ ಮುನ್ನ, ಇಬ್ಬರೂ ದೈಹಿಕ ಸಂಪರ್ಕ ಬೆಳೆಸಿಕೊಂಡಿದ್ದರಿಂದ ಹೆಣ್ಣು ಮಗು ಜನಿಸಿತ್ತು. 30 ದಿನಗಳ ಮಗುವನ್ನು ಚಂದನ ಮಾರಾಟಕ್ಕೆ ಮುಂದಾಗಿದ್ದರು. ಅದನ್ನು ಮಹಾದೇವಿ ಅವರಿಗೆ ತಂದುಕೊಟ್ಟಿದ್ದರು. ಇದಕ್ಕೆ ₹1.40 ಲಕ್ಷ ನಿಗದಿಪಡಿಸಲಾಗಿತ್ತು. ಈ ವಿಚಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗೆ ಗೊತ್ತಾಗಿತ್ತು. ರಹಸ್ಯ ಕಾರ್ಯಾಚರಣೆ ನಡೆಸಿದ ಅವರು, ಮಗು ಖರೀದಿಸುವುದಾಗಿ ಭಾನುವಾರ ಮಹಾದೇವಿ ಅವರನ್ನು ಬೆಳಗಾವಿಗೆ ಕರೆಯಿಸಿದರು. ಅಲ್ಲಿ ಮಗು ರಕ್ಷಿಸಿ, ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ರಕ್ಷಣಾ ಘಟಕದ ದೂರು ಆಧರಿಸಿ, ಪ್ರಕರಣದಲ್ಲಿ ಭಾಗಿಯಾದ ಐವರನ್ನು ಬಂಧಿಸಲಾಗಿದೆ’ ಎಂದು ಮಾಳಮಾರುತಿ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.