‘ಕಾರು ಚಾಲಕ ಮಹಮ್ಮದ್ಷರೀಫ್ ರಸ್ತೆಯಲ್ಲಿ ಅಡ್ಡಬಂದು, ವಾಹನ ಚಾಲನೆಗೆ ಸಂಬಂಧಿಸಿದಂತೆ ವಾಗ್ವಾದ ಮಾಡಿದರು. ಶರ್ಟ್ ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಏರ್ಗನ್ ಹಿಡಿದು ಜೀವ ಬೆದರಿಕೆ ಹಾಕಿದರು ಎಂದು ಬಸ್ನ ಚಾಲಕ ಮಲ್ಲಿಕಾರ್ಜುನ ಅಂಕಲಿ ದೂರು ನೀಡಿದ್ದರು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದೇವೆ. ಏರ್ಗನ್, ಕಾರು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದು ಮಾಳಮಾರುತಿ ಪೊಲೀಸ್ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.