‘ಲಕ್ಷ್ಮಿ ಹೆಬ್ಬಾಳಕರ ಪ್ರಚೋದನೆ ನೀಡಿದ್ದರಿಂದ ಆಯೇಷಾ ಸನದಿ, ಸಂಜಯ ಜಾಧವ, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರ್ಡಿ, ಮುಸ್ತಾಕ್ ಮುಲ್ಲಾ, ಸದ್ದಾಮ್ ವೈಭವ ನಗರ, ರೋಹಿಣಿ ಬಾಬ್ಟೆ, ಶಂಕರಗೌಡ ಪಾಟೀಲ, ಸಂಗನಗೌಡ ಪಾಟೀಲ, ಭಾರತಿ ಬುಡವಿ ಮತ್ತು ಇತರೆ 100 ಜನರು ಏಪ್ರಿಲ್ 13ರಂದು ನನ್ನ ಮನೆಗೆ ಮುತ್ತಿಗೆ ಹಾಕಿದ್ದಾರೆ. ಮಾರಕಾಸ್ತ್ರಗಳಿಂದ ಮನೆಯಲ್ಲಿನ ಬೆಲೆಬಾಳುವ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಒಡ್ಡಿದ್ದಾರೆ. ಇವರೆಲ್ಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.