<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ತಾಲ್ಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎನ್ನುವವರು ಎರಡು ಎಕರೆಯಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಶುಕ್ರವಾರ ಕಡಿದು ಹಾಕಿದ್ದಾರೆ. ‘ಸರಿಯಾದ ಬೆಲೆ ಮತ್ತು ಮಾರುಕಟ್ಟೆ ಸಿಗದಿರುವುದು ಹಾಗೂ ರೋಗ ಬಾಧೆಯಿಂದ ಕಂಗೆಟ್ಟು ಈ ನಿರ್ಧಾರಕ್ಕೆ ಬರಬೇಕಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಹವಾಮಾನ ವೈಪರೀತ್ಯದಿಂದ ಬೆಳೆಗೆ ಹಲವು ರೋಗಗಳ ಬಾಧೆ ಕಾಣಿಸಿಕೊಳ್ಳುತ್ತಿದೆ. ಬೆಳೆಯಲು ₹ 3 ಲಕ್ಷದಿಂದ ₹ 4 ಲಕ್ಷ ವೆಚ್ಚವಾಗಿದೆ. ಆರು ವರ್ಷಗಳಿಂದ ಗಿಡಗಳನ್ನು ಬೆಳೆಸುತ್ರಿದ್ದೆ. ಪ್ರತಿ ವರ್ಷವೂ ನಷ್ಟವೇ ಆಗಿದೆ. ಕೈಗೆ ಬಂದ ಅಲ್ಪ ಸ್ವಲ್ಪ ಫಸಲಿಗೆ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರಿಯಾದ ಬೆಲೆ ಸಿಗಲಿಲ್ಲ. ಮಾರುಕಟ್ಟೆಯೂ ಇರಲಿಲ್ಲ’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನ ಹಲವರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವರು ಕೀಟನಾಶಕಗಳನ್ನು ಸಿಂಪಡಿಸಿ ರೋಗ ಬಾಧೆಯನ್ನು ಹತೋಟಿಗೆ ತರುತ್ತಾರೆ. ನನಗೆ ಖರ್ಚು ಭರಿಸುವ ಶಕ್ತಿ ಇಲ್ಲವಾದ್ದರಿಂದ ಗಿಡಗಳನ್ನು ನಾಶಪಡಿಸುತ್ತಿದ್ದೇನೆ. ಮುಂದೇನು ಮಾಡಬೇಕು ಎನ್ನುವುದು ತೋಚದಂತಾಗಿದೆ. ಸರ್ಕಾರವು ಪರಿಹಾರ ನೀಡಿದರೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ತಾಲ್ಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎನ್ನುವವರು ಎರಡು ಎಕರೆಯಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಶುಕ್ರವಾರ ಕಡಿದು ಹಾಕಿದ್ದಾರೆ. ‘ಸರಿಯಾದ ಬೆಲೆ ಮತ್ತು ಮಾರುಕಟ್ಟೆ ಸಿಗದಿರುವುದು ಹಾಗೂ ರೋಗ ಬಾಧೆಯಿಂದ ಕಂಗೆಟ್ಟು ಈ ನಿರ್ಧಾರಕ್ಕೆ ಬರಬೇಕಾಯಿತು’ ಎಂದು ತಿಳಿಸಿದ್ದಾರೆ.</p>.<p>‘ಹವಾಮಾನ ವೈಪರೀತ್ಯದಿಂದ ಬೆಳೆಗೆ ಹಲವು ರೋಗಗಳ ಬಾಧೆ ಕಾಣಿಸಿಕೊಳ್ಳುತ್ತಿದೆ. ಬೆಳೆಯಲು ₹ 3 ಲಕ್ಷದಿಂದ ₹ 4 ಲಕ್ಷ ವೆಚ್ಚವಾಗಿದೆ. ಆರು ವರ್ಷಗಳಿಂದ ಗಿಡಗಳನ್ನು ಬೆಳೆಸುತ್ರಿದ್ದೆ. ಪ್ರತಿ ವರ್ಷವೂ ನಷ್ಟವೇ ಆಗಿದೆ. ಕೈಗೆ ಬಂದ ಅಲ್ಪ ಸ್ವಲ್ಪ ಫಸಲಿಗೆ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರಿಯಾದ ಬೆಲೆ ಸಿಗಲಿಲ್ಲ. ಮಾರುಕಟ್ಟೆಯೂ ಇರಲಿಲ್ಲ’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನ ಹಲವರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವರು ಕೀಟನಾಶಕಗಳನ್ನು ಸಿಂಪಡಿಸಿ ರೋಗ ಬಾಧೆಯನ್ನು ಹತೋಟಿಗೆ ತರುತ್ತಾರೆ. ನನಗೆ ಖರ್ಚು ಭರಿಸುವ ಶಕ್ತಿ ಇಲ್ಲವಾದ್ದರಿಂದ ಗಿಡಗಳನ್ನು ನಾಶಪಡಿಸುತ್ತಿದ್ದೇನೆ. ಮುಂದೇನು ಮಾಡಬೇಕು ಎನ್ನುವುದು ತೋಚದಂತಾಗಿದೆ. ಸರ್ಕಾರವು ಪರಿಹಾರ ನೀಡಿದರೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>