<p><strong>ತೆಲಸಂಗ (ಬೆಳಗಾವಿ ಜಿಲ್ಲೆ): </strong>ಅಥಣಿ ಪೂರ್ವ ಭಾಗದ ಗ್ರಾಮಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಸಹಿತ ಸುರಿದ ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಮಾವು, ತರಕಾರಿ ಬೆಳೆಗಳು ಹಾಳಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ರೈತರು ಕಂಗಾಲಾಗಿದ್ದಾರೆ.</p>.<p>ವಾರದ ಸಂತೆಯ ದಿನವಾದ್ದರಿಂದ ವ್ಯಾಪಾರಿಗಳು ಮತ್ತು ಜನ ಪರದಾಡಿದರು. ಮಾರಾಟಕ್ಕೆ ತಂದಿದ್ದ ವಸ್ತುಗಳು ನೀರುಪಾಲಾಗಿ ವ್ಯಾಪಾರಿಗಳು ನಷ್ಟ ಅನುಭವಿಸಬೇಕಾಯಿತು.</p>.<p>ಪ್ರಸಕ್ತ ವರ್ಷದ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದ್ರಾಕ್ಷಿ ಗಿಡಗಳ ಎಲೆಗಳೆಲ್ಲ ಉದುರಿ ಶೇ 90ರಷ್ಟು ಬೆಳೆ ಹಾಳಾಗಿತ್ತು. ಸದ್ಯಕ್ಕೆ ಅಳಿದುಳಿದ ಬೆಳೆ ಕಟಾವಿಗೆ ಬಂದಿತ್ತು.</p>.<p>‘ವರ್ಷದಿಂದ ವರ್ಷಕ್ಕೆ ಒಂದಿಲ್ಲೊಂದು ಹೊಡೆತದಿಂದ ರೈತ ಸಂಕಷ್ಟಕ್ಕೀಡಾಗುತ್ತಿದ್ದಾನೆ. ಅಕಾಲಿಕ ಮಳೆಯಿಂದ ನಷ್ಟ ಅನುಭವಿಸಿರುವ ನಮಗೆ ಸರ್ಕಾರದಿಂದ ಸಮರ್ಪಕ ಪರಿಹಾರ ದೊರೆಯಬೇಕು’ ಎಂದು ಬನ್ನೂರದ ದ್ರಾಕ್ಷಿ ಬೆಳೆಗಾರ ಎ.ಕೆ. ಹನಗಂಡಿ ಕೋರಿದರು.</p>.<p>‘ದ್ರಾಕ್ಷಿ ಕಟಾವು ಮಾಡುವ ಹಂತಕ್ಕೆ ಬಂದಿತ್ತು. ಮಳೆಯಿಂದ ಹಾನಿಯಾಗಿದೆ. ಶೆಡ್ಡಲ್ಲಿ ತೊಯ್ದಿರುವ ಒಣ ದ್ರಾಕ್ಷಿ ಗುಣಮಟ್ಟ ಕಳೆದುಕೊಳ್ಳಲಿದೆ. ಆಲಿಕಲ್ಲು ಮಳೆಗೆ ಹಾಳಾದ ಕಲ್ಲಂಗಡಿ ಬೆಳೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ತೋಟಗಾರಿಕೆ ಅಧಿಕಾರಿ ವಿನೋದ ಚುನುಮುರಿ ತಿಳಿಸಿದರು.</p>.<p class="Briefhead"><strong>ಐಗಳಿ ವರದಿ</strong></p>.<p>ಐಗಳಿ: ಮೂರು ದಿನಗಳಿಂದ ಜೋರು ಗಾಳಿ, ಗುಡುಗು ಸಹಿತ ಆಗಾಗ ಬೀಳುತ್ತಿರುವ ಮಳೆಯಿಂದಾಗಿ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ದ್ರಾಕ್ಷಿ ಹಣ್ಣಿಗೆ ಯೋಗ್ಯ ದರ ಸಿಗಲಿವೆಂದು, ಶೆಡ್ಗಳಲ್ಲಿ ಒಣಗಲು ಹಾಕಿದ್ದ ದ್ರಾಕ್ಷಿ ಮಳೆ ನೀರಿನಿಂದ ನೆನೆದಿದೆ. ಇದರಿಂದಾಗಿ ನಷ್ಟ ಉಂಟಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ತೋಟಗಾರಿಕೆಯ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ, ‘ಅಕಾಲಿಕ ಮಳೆಯಿಂದ ಐಗಳಿ, ಕೋಹಳ್ಳಿ, ಕಕಮರಿ, ರಾಮತೀರ್ಥ, ಅರಟಾಳ, ಕೊಟ್ಟಲಗಿ ಮೊದಲಾದ ಕಡೆಗಳಲ್ಲಿ ಒಣ ದ್ರಾಕ್ಷಿಗೆ ಹಾನಿಯಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಲಸಂಗ (ಬೆಳಗಾವಿ ಜಿಲ್ಲೆ): </strong>ಅಥಣಿ ಪೂರ್ವ ಭಾಗದ ಗ್ರಾಮಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಸಹಿತ ಸುರಿದ ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಮಾವು, ತರಕಾರಿ ಬೆಳೆಗಳು ಹಾಳಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ರೈತರು ಕಂಗಾಲಾಗಿದ್ದಾರೆ.</p>.<p>ವಾರದ ಸಂತೆಯ ದಿನವಾದ್ದರಿಂದ ವ್ಯಾಪಾರಿಗಳು ಮತ್ತು ಜನ ಪರದಾಡಿದರು. ಮಾರಾಟಕ್ಕೆ ತಂದಿದ್ದ ವಸ್ತುಗಳು ನೀರುಪಾಲಾಗಿ ವ್ಯಾಪಾರಿಗಳು ನಷ್ಟ ಅನುಭವಿಸಬೇಕಾಯಿತು.</p>.<p>ಪ್ರಸಕ್ತ ವರ್ಷದ ಆರಂಭದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದ್ರಾಕ್ಷಿ ಗಿಡಗಳ ಎಲೆಗಳೆಲ್ಲ ಉದುರಿ ಶೇ 90ರಷ್ಟು ಬೆಳೆ ಹಾಳಾಗಿತ್ತು. ಸದ್ಯಕ್ಕೆ ಅಳಿದುಳಿದ ಬೆಳೆ ಕಟಾವಿಗೆ ಬಂದಿತ್ತು.</p>.<p>‘ವರ್ಷದಿಂದ ವರ್ಷಕ್ಕೆ ಒಂದಿಲ್ಲೊಂದು ಹೊಡೆತದಿಂದ ರೈತ ಸಂಕಷ್ಟಕ್ಕೀಡಾಗುತ್ತಿದ್ದಾನೆ. ಅಕಾಲಿಕ ಮಳೆಯಿಂದ ನಷ್ಟ ಅನುಭವಿಸಿರುವ ನಮಗೆ ಸರ್ಕಾರದಿಂದ ಸಮರ್ಪಕ ಪರಿಹಾರ ದೊರೆಯಬೇಕು’ ಎಂದು ಬನ್ನೂರದ ದ್ರಾಕ್ಷಿ ಬೆಳೆಗಾರ ಎ.ಕೆ. ಹನಗಂಡಿ ಕೋರಿದರು.</p>.<p>‘ದ್ರಾಕ್ಷಿ ಕಟಾವು ಮಾಡುವ ಹಂತಕ್ಕೆ ಬಂದಿತ್ತು. ಮಳೆಯಿಂದ ಹಾನಿಯಾಗಿದೆ. ಶೆಡ್ಡಲ್ಲಿ ತೊಯ್ದಿರುವ ಒಣ ದ್ರಾಕ್ಷಿ ಗುಣಮಟ್ಟ ಕಳೆದುಕೊಳ್ಳಲಿದೆ. ಆಲಿಕಲ್ಲು ಮಳೆಗೆ ಹಾಳಾದ ಕಲ್ಲಂಗಡಿ ಬೆಳೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ತೋಟಗಾರಿಕೆ ಅಧಿಕಾರಿ ವಿನೋದ ಚುನುಮುರಿ ತಿಳಿಸಿದರು.</p>.<p class="Briefhead"><strong>ಐಗಳಿ ವರದಿ</strong></p>.<p>ಐಗಳಿ: ಮೂರು ದಿನಗಳಿಂದ ಜೋರು ಗಾಳಿ, ಗುಡುಗು ಸಹಿತ ಆಗಾಗ ಬೀಳುತ್ತಿರುವ ಮಳೆಯಿಂದಾಗಿ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ದ್ರಾಕ್ಷಿ ಹಣ್ಣಿಗೆ ಯೋಗ್ಯ ದರ ಸಿಗಲಿವೆಂದು, ಶೆಡ್ಗಳಲ್ಲಿ ಒಣಗಲು ಹಾಕಿದ್ದ ದ್ರಾಕ್ಷಿ ಮಳೆ ನೀರಿನಿಂದ ನೆನೆದಿದೆ. ಇದರಿಂದಾಗಿ ನಷ್ಟ ಉಂಟಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ತೋಟಗಾರಿಕೆಯ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ, ‘ಅಕಾಲಿಕ ಮಳೆಯಿಂದ ಐಗಳಿ, ಕೋಹಳ್ಳಿ, ಕಕಮರಿ, ರಾಮತೀರ್ಥ, ಅರಟಾಳ, ಕೊಟ್ಟಲಗಿ ಮೊದಲಾದ ಕಡೆಗಳಲ್ಲಿ ಒಣ ದ್ರಾಕ್ಷಿಗೆ ಹಾನಿಯಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>