ಉದ್ದೇಶ: ಸಂಗ್ರಹವಾಗುವ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಏಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಪರಿಹಾರಕ್ಕೆ ವರದಿ ತಯಾರಿಸಲು ಬಳಸಲಾಗುವುದು. ಬೆಳೆ ವಿಮೆ ಯೋಜನೆಯಲ್ಲಿ ತಾಲ್ಲೂಕುವಾರು ಬೆಳೆ ಪರಿಶೀಲಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಇದನ್ನು ಆಧಾರವಾಗಿ ಇಟ್ಟುಕೊಳ್ಳಲಾಗುವುದು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ ಉಪಯೋಗಿಸಲಾಗುವುದು. ಹೀಗಾಗಿ, ರೈತರು ಸಮೀಕ್ಷೆಯಲ್ಲಿ ತಪ್ಪದೆ ಪಾಲ್ಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.