<p><strong>ಬೆಳಗಾವಿ:</strong> ‘ನಮ್ಮ ಸೇವೆ ಕಾಯಂಗೊಳಿಸಿ ಸಾಮಾಜಿಕ ಭದ್ರತೆ ಒದಗಿಸಿ’ ಎಂದು ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p><p>‘ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳೊಂದಿಗೆ ನಾವು ಬೆಳೆ ಹಾನಿ ಸಮೀಕ್ಷೆ ಮಾಡುತ್ತಿದ್ದೇವೆ. ಸಮೀಕ್ಷೆಗೆ ಹೋದಾಗ, ಕೆಲವೊಮ್ಮೆ ಪ್ರಾಣಿಗಳಿಂದ ಹಲ್ಲೆಗಳೂ ನಡೆದಿವೆ. ಹೀಗಿದ್ದರೂ ನಮಗೆ ವಹಿಸಿದ ಜವಾಬ್ದಾರಿಯನ್ನು ಏಳೆಂಟು ವರ್ಷಗಳಿಂದ ಸರಿಯಾಗಿ ನಿಭಾಯಿಸುತ್ತಿದ್ದರೂ ಸರ್ಕಾರ ಸೌಲಭ್ಯ ಕೊಡುತ್ತಿಲ್ಲ’ ಎಂದು ದೂರಿದರು.</p><p>‘ಸಮೀಕ್ಷೆ ಮಾಡುತ್ತಿರುವ ನಮ್ಮ ಸೇವೆ ಕಾಯಂಗೊಳಿಸಬೇಕು. ಗುರುತಿನ ಚೀಟಿ, ಜೀವವಿಮೆ ನೀಡುವ ಜತೆಗೆ, ಗೌರವಧನ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಮ್ಮ ಸೇವೆ ಕಾಯಂಗೊಳಿಸಿ ಸಾಮಾಜಿಕ ಭದ್ರತೆ ಒದಗಿಸಿ’ ಎಂದು ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p><p>ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p><p>‘ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳೊಂದಿಗೆ ನಾವು ಬೆಳೆ ಹಾನಿ ಸಮೀಕ್ಷೆ ಮಾಡುತ್ತಿದ್ದೇವೆ. ಸಮೀಕ್ಷೆಗೆ ಹೋದಾಗ, ಕೆಲವೊಮ್ಮೆ ಪ್ರಾಣಿಗಳಿಂದ ಹಲ್ಲೆಗಳೂ ನಡೆದಿವೆ. ಹೀಗಿದ್ದರೂ ನಮಗೆ ವಹಿಸಿದ ಜವಾಬ್ದಾರಿಯನ್ನು ಏಳೆಂಟು ವರ್ಷಗಳಿಂದ ಸರಿಯಾಗಿ ನಿಭಾಯಿಸುತ್ತಿದ್ದರೂ ಸರ್ಕಾರ ಸೌಲಭ್ಯ ಕೊಡುತ್ತಿಲ್ಲ’ ಎಂದು ದೂರಿದರು.</p><p>‘ಸಮೀಕ್ಷೆ ಮಾಡುತ್ತಿರುವ ನಮ್ಮ ಸೇವೆ ಕಾಯಂಗೊಳಿಸಬೇಕು. ಗುರುತಿನ ಚೀಟಿ, ಜೀವವಿಮೆ ನೀಡುವ ಜತೆಗೆ, ಗೌರವಧನ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>