ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಕ್ರೂಸರ್ ವಾಹನ ಪಲ್ಟಿ: ಮೃತರ ಕುಟುಂಬದವರಿಗೆ ತಲಾ ₹ 7 ಲಕ್ಷ ಪರಿಹಾರ

Last Updated 26 ಜೂನ್ 2022, 7:38 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಕಳ್ಯಾಳ್ ಬಳಿ ಅಪಘಾತದಲ್ಲಿ ಮೃತಪಟ್ಟ ಏಳೂ ಜನರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಸರ್ಕಾರದಿಂದ ನೀಡಲಾಗುವುದು. ಅಲ್ಲದೇ, ಜಿಲ್ಲಾಡಳಿತದಿಂದ ಕೂಡ ತಲಾ ₹ 2 ಲಕ್ಷ ಕೊಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜವಳಿ ಮಳಿಗೆ ಉದ್ಘಾಟನೆಗಾಗಿ ಭಾನುವಾರ ವಿಶೇಷ ವಿಮಾನದ ಮೂಲಕ ನಗರಕ್ಕೆ ಬಂದ ಅವರು, ಅಪಘಾತ ಕುರಿತು ದುಃಖ ವ್ಯಕ್ತಪಡಿಸಿದರು.

ದುಡಿಯುವ ಜನ ಮೃತಪಟ್ಟಿದ್ದು ಅತೀವ ದುಃಖದ ಸಂಗತಿ. ಇದು ದೊಡ್ಡ ಅನಾಹುತ. ಘಟನೆಯಲ್ಲಿ ಗಾಯಗೊಂಡವರಿಗೂ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಚಿಕಿತ್ಸೆ ಕೊಡಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT