ಶಶಿ ಸಿದ್ನಾಳ ಪ್ರತಿಷ್ಠಾನದ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ್ ಕಿಟ್ಗಳನ್ನು ವಿತರಿಸಲು ಸಹಕರಿಸಿದರು ಹಾಗೂ ಸವದತ್ತಿ ತಾಲ್ಲೂಕಿನ ಮುನವಳ್ಳಿ, ಜೋರಾಪುರ, ತೆಗ್ಯಾಲ, ಜಕಬಾಳ, ಅತಗಲ್ಲ, ಬಸರಗಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಆತ್ಮಸ್ಥೈರ್ಯ ತುಂಬಿದರು. ಕೇಂದ್ರ ಸರ್ಕಾರ ಸಂತ್ರಸ್ತರ ಸಹಾಯಕ್ಕೆ ನಿಲ್ಲಲಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಗ್ರಾಮ ಪಂಚಾಯ್ತಿ ಮೂಲಕ ಮನೆಗಳನ್ನು ನಿರ್ಮಿಸಿಕೊಡಲು ಸಹಾಯ ಮಾಡುವುದಾಗಿ ಭರವಸೆ ನೀಡಿದರು.