<p><strong>ಬೆಳಗಾವಿ</strong>: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ಪೂರ್ವಯೋಜಿತವಾಗಿದೆ. ಇದು ಹೊಸದೇನಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.</p>.<p>ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉಪ ಚುನಾವಣೆ ಬಂದಿರುವ ಈ ಸಂದರ್ಭದಲ್ಲಿ ನಮ್ಮನ್ನು ಡಿಸ್ಟರ್ಬ್ ಮಾಡಲು ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಹಲವು ಬಾರಿ ನಾವು ಆರೋಪ ಮಾಡಿದ್ದೇವೆ. ಉಪ ಚುನಾವಣೆ ಸಂದರ್ಭದಲ್ಲಿ ನಮಗೆ ತೊಂದರೆ ಕೊಡುವ ಉದ್ದೇಶದಿಂದಲೇ ದಾಳಿ ನಡೆದಿದೆ. ಅಧ್ಯಕ್ಷರೊಬ್ಬರ ಮೇಲೆ ದಾಳಿ ಮಾಡಿದರೆ ಏನೂ ಆಗುವುದಿಲ್ಲ. ಪಕ್ಷ ದೊಡ್ಡದು. ನಮ್ಮನ್ನು ಹೆದರಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.</p>.<p>ಶಿವಕುಮಾರ್ ಸಮರ್ಥರಾಗಿದ್ದಾರೆ. ಅವರು ಅದನ್ನು ಫೇಸ್ ಮಾಡುತ್ತಾರೆ. ಅವರ ಅದ್ಯಕ್ಷತೆಯಲ್ಲಿ ಪಕ್ಷ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.</p>.<p><strong>ಸಮರ್ಥರಿದ್ದಾರೆ ಎದುರಿಸುತ್ತಾರೆ</strong></p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ಮಾಡಿರುವ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿ ದಾಳಿ ಮಾಡಿಸಿದ್ದಾರೆ ಎಂದು ದೂರಿದರು.</p>.<p>ಇದನ್ನು ನಮ್ಮ ನಾಯಕರು ಸಮರ್ಥವಾಗಿ ಎದುರಿಸುತ್ತಾರೆ. ಇಡಿ (ಜಾರಿ ನಿರ್ದೇಶನಾಲಯ) ಆಯ್ತು, ಐಟಿ (ಆದಾಯ ತೆರಿಗೆ) ದಾಳಿ ಆಗಿತ್ತು. ಈಗ ಸಿಬಿಐ ಅಧಿಕಾರಿಗಳಿಂದ ದಾಳಿ ಮಾಡಲಾಗುತ್ತಿದೆ. ಉಪ ಚುನಾವಣೆ ವೇಳೆ ದಾಳಿಯ ಉದ್ದೇಶ ಏನು ಎಂದು ಪ್ರಶ್ನಿಸಿದರು</p>.<p>ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ. ಕಾನೂನಿಗೆ ಪ್ರತಿಯೊಬ್ಬರೂ ತಲೆ ಬಾಗಲೇಬೇಕು. ನಮ್ಮ ನಾಯಕರು ಇದೆಲ್ಲವನ್ನೂ ಕಾನೂನು ಮೂಲಕವೇ ಸಮರ್ಥವಾಗಿ ಎದುರಿಸುತ್ತಾರೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ...</strong></p>.<p><a href="https://www.prajavani.net/karnataka-news/cbi-raids-on-karnataka-congress-chief-dk-shivakumar-and-his-brother-dk-suresh-768175.html" target="_blank"><strong>ಡಿ.ಕೆ. ಶಿವಕುಮಾರ್ ನಿವಾಸ, ಕಚೇರಿ ಮೇಲೆ ಸಿಬಿಐ ದಿಢೀರ್ ದಾಳಿ</strong></a></p>.<p><a href="https://www.prajavani.net/karnataka-news/political-leaders-critics-cbi-attack-on-d-k-shivakumar-768176.html" target="_blank"><strong>ಡಿಕೆಶಿ ಮನೆ, ಕಚೇರಿ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ನಾಯಕರ ಆಕ್ರೋಶ</strong></a></p>.<p><strong><a href="https://www.prajavani.net/karnataka-news/cbi-raids-congress-dk-shivakumar-premises-in-alleged-corruption-case-768181.html%20%E2%80%8B" target="_blank">ಕೋರ್ಟ್ ತಡೆಯಾಜ್ಞೆ ಇರುವಾಗ ಹೇಗೆ ದಾಳಿ ನಡೆಸುತ್ತಾರೆ: ವಕೀಲ ಪೊನ್ನಣ್ಣ ಪ್ರಶ್ನೆ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ಪೂರ್ವಯೋಜಿತವಾಗಿದೆ. ಇದು ಹೊಸದೇನಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.</p>.<p>ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉಪ ಚುನಾವಣೆ ಬಂದಿರುವ ಈ ಸಂದರ್ಭದಲ್ಲಿ ನಮ್ಮನ್ನು ಡಿಸ್ಟರ್ಬ್ ಮಾಡಲು ಈ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಹಲವು ಬಾರಿ ನಾವು ಆರೋಪ ಮಾಡಿದ್ದೇವೆ. ಉಪ ಚುನಾವಣೆ ಸಂದರ್ಭದಲ್ಲಿ ನಮಗೆ ತೊಂದರೆ ಕೊಡುವ ಉದ್ದೇಶದಿಂದಲೇ ದಾಳಿ ನಡೆದಿದೆ. ಅಧ್ಯಕ್ಷರೊಬ್ಬರ ಮೇಲೆ ದಾಳಿ ಮಾಡಿದರೆ ಏನೂ ಆಗುವುದಿಲ್ಲ. ಪಕ್ಷ ದೊಡ್ಡದು. ನಮ್ಮನ್ನು ಹೆದರಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.</p>.<p>ಶಿವಕುಮಾರ್ ಸಮರ್ಥರಾಗಿದ್ದಾರೆ. ಅವರು ಅದನ್ನು ಫೇಸ್ ಮಾಡುತ್ತಾರೆ. ಅವರ ಅದ್ಯಕ್ಷತೆಯಲ್ಲಿ ಪಕ್ಷ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.</p>.<p><strong>ಸಮರ್ಥರಿದ್ದಾರೆ ಎದುರಿಸುತ್ತಾರೆ</strong></p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ಮಾಡಿರುವ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿ ದಾಳಿ ಮಾಡಿಸಿದ್ದಾರೆ ಎಂದು ದೂರಿದರು.</p>.<p>ಇದನ್ನು ನಮ್ಮ ನಾಯಕರು ಸಮರ್ಥವಾಗಿ ಎದುರಿಸುತ್ತಾರೆ. ಇಡಿ (ಜಾರಿ ನಿರ್ದೇಶನಾಲಯ) ಆಯ್ತು, ಐಟಿ (ಆದಾಯ ತೆರಿಗೆ) ದಾಳಿ ಆಗಿತ್ತು. ಈಗ ಸಿಬಿಐ ಅಧಿಕಾರಿಗಳಿಂದ ದಾಳಿ ಮಾಡಲಾಗುತ್ತಿದೆ. ಉಪ ಚುನಾವಣೆ ವೇಳೆ ದಾಳಿಯ ಉದ್ದೇಶ ಏನು ಎಂದು ಪ್ರಶ್ನಿಸಿದರು</p>.<p>ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ. ಕಾನೂನಿಗೆ ಪ್ರತಿಯೊಬ್ಬರೂ ತಲೆ ಬಾಗಲೇಬೇಕು. ನಮ್ಮ ನಾಯಕರು ಇದೆಲ್ಲವನ್ನೂ ಕಾನೂನು ಮೂಲಕವೇ ಸಮರ್ಥವಾಗಿ ಎದುರಿಸುತ್ತಾರೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ...</strong></p>.<p><a href="https://www.prajavani.net/karnataka-news/cbi-raids-on-karnataka-congress-chief-dk-shivakumar-and-his-brother-dk-suresh-768175.html" target="_blank"><strong>ಡಿ.ಕೆ. ಶಿವಕುಮಾರ್ ನಿವಾಸ, ಕಚೇರಿ ಮೇಲೆ ಸಿಬಿಐ ದಿಢೀರ್ ದಾಳಿ</strong></a></p>.<p><a href="https://www.prajavani.net/karnataka-news/political-leaders-critics-cbi-attack-on-d-k-shivakumar-768176.html" target="_blank"><strong>ಡಿಕೆಶಿ ಮನೆ, ಕಚೇರಿ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ನಾಯಕರ ಆಕ್ರೋಶ</strong></a></p>.<p><strong><a href="https://www.prajavani.net/karnataka-news/cbi-raids-congress-dk-shivakumar-premises-in-alleged-corruption-case-768181.html%20%E2%80%8B" target="_blank">ಕೋರ್ಟ್ ತಡೆಯಾಜ್ಞೆ ಇರುವಾಗ ಹೇಗೆ ದಾಳಿ ನಡೆಸುತ್ತಾರೆ: ವಕೀಲ ಪೊನ್ನಣ್ಣ ಪ್ರಶ್ನೆ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>