ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಾಸಕ, ಸಚಿವ ಆಗುವುದಕ್ಕಿಂತ ಮುಂಚೆ ಎಷ್ಟು ಆಸ್ತಿ ಇತ್ತು, ಈಗ ಎಷ್ಟಿದೆ ಎನ್ನುವುದನ್ನು ಬಹಿರಂಗಪಡಿಸಲಿ. ಆಗ, ಅವರ ನಿವಾಸದ ಮೇಲೆ ತನಿಖಾ ಸಂಸ್ಥೆಗಳು ಏಕೆ ದಾಳಿ ನಡೆಸುತ್ತಿವೆ ಎನ್ನುವುದು ಎಲ್ಲರಿಗೂ ತಿಳಿಯುತ್ತದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.