<p><strong>ಬೆಳಗಾವಿ</strong>: ‘ಪ್ರಭಾಕರ ಕೋರೆ ಅವರನ್ನು ನಾವು ಕಾಂಗ್ರೆಸ್ಗೆ ಆಹ್ವಾನಿಸಿಲ್ಲ. ಅವರು ಬರುವುದೂ ಇಲ್ಲ. ಸೌಹಾರ್ದ ಭೇಟಿಗಾಗಿ ಇಲ್ಲಿಗೆ ಬಂದು, ಜೋಳದ ರೊಟ್ಟಿ ಊಟ ಮಾಡಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ನಗರದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಪ್ರಭಾಕರ ಕೋರೆ ನಮಗೆ ಸ್ನೇಹಿತರು. ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಅವರು ಸಹಕಾರ ನೀಡುತ್ತಾರೆ. ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಬರುವ ಗಣ್ಯರ ವಸತಿಗಾಗಿ ತಮ್ಮ ಶಿಕ್ಷಣ ಸಂಸ್ಥೆಗಳಿಂದ 170ಕ್ಕೂ ಅಧಿಕ ಕೊಠಡಿ ಕೊಟ್ಟಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಹಾಯ ಮಾಡುತ್ತಿದ್ದಾರೆ’ ಎಂದರು.</p>.<p>‘ಪ್ರಭಾಕರ ಕೋರೆ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ ದೊಡ್ಡ ಕೊಡುಗೆ ನೀಡಿದೆ. ಜತೆಗೆ, ಹೋರಾಟಕ್ಕೆ ಆರ್ಥಿಕವಾಗಿಯೂ ಸಹಾಯ ಮಾಡಿದೆ’ ಎಂದು ಹೇಳಿದರು.</p>.<p>‘ಸಾಮರ್ಥ್ಯಕ್ಕೆ ತಕ್ಕಂತೆ ಕೋರೆ ಅವರಿಗೆ ಸ್ಥಾನಮಾನ ಸಿಗಲಿಲ್ಲವೇ’ ಎಂಬ ಪ್ರಶ್ನೆಗೆ, ‘ಬಿಜೆಪಿಯವರ ಬಳಿ ಇದಕ್ಕೆ ಉತ್ತರ ಕೇಳಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಪ್ರಭಾಕರ ಕೋರೆ ಅವರನ್ನು ನಾವು ಕಾಂಗ್ರೆಸ್ಗೆ ಆಹ್ವಾನಿಸಿಲ್ಲ. ಅವರು ಬರುವುದೂ ಇಲ್ಲ. ಸೌಹಾರ್ದ ಭೇಟಿಗಾಗಿ ಇಲ್ಲಿಗೆ ಬಂದು, ಜೋಳದ ರೊಟ್ಟಿ ಊಟ ಮಾಡಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ನಗರದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಪ್ರಭಾಕರ ಕೋರೆ ನಮಗೆ ಸ್ನೇಹಿತರು. ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಅವರು ಸಹಕಾರ ನೀಡುತ್ತಾರೆ. ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಬರುವ ಗಣ್ಯರ ವಸತಿಗಾಗಿ ತಮ್ಮ ಶಿಕ್ಷಣ ಸಂಸ್ಥೆಗಳಿಂದ 170ಕ್ಕೂ ಅಧಿಕ ಕೊಠಡಿ ಕೊಟ್ಟಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಹಾಯ ಮಾಡುತ್ತಿದ್ದಾರೆ’ ಎಂದರು.</p>.<p>‘ಪ್ರಭಾಕರ ಕೋರೆ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ ದೊಡ್ಡ ಕೊಡುಗೆ ನೀಡಿದೆ. ಜತೆಗೆ, ಹೋರಾಟಕ್ಕೆ ಆರ್ಥಿಕವಾಗಿಯೂ ಸಹಾಯ ಮಾಡಿದೆ’ ಎಂದು ಹೇಳಿದರು.</p>.<p>‘ಸಾಮರ್ಥ್ಯಕ್ಕೆ ತಕ್ಕಂತೆ ಕೋರೆ ಅವರಿಗೆ ಸ್ಥಾನಮಾನ ಸಿಗಲಿಲ್ಲವೇ’ ಎಂಬ ಪ್ರಶ್ನೆಗೆ, ‘ಬಿಜೆಪಿಯವರ ಬಳಿ ಇದಕ್ಕೆ ಉತ್ತರ ಕೇಳಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>