‘ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಬೇನಾಮಿ ಹೆಸರಿನಲ್ಲಿ ಹಣ ಪಡೆದು ಕಾರ್ಖಾನೆ ನಡೆಸುವ ಕೆಲಸವಾಗುತ್ತಿದೆ. ಈ ವಿಚಾರವನ್ನು ಕೇಂದ್ರ ಸಚಿವರಿಗೆ ತಿಳಿಸಬೇಕು. ಹಣ ವಸೂಲಿಗೆ ಆಸ್ತಿ ಜಪ್ತಿ ಮಾಡಬೇಕು. ಶಾಸಕರಿಗೆ ರಕ್ಷಣೆ ನೀಡಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು. ರೈತರು ಹಾಗೂ ಬ್ಯಾಂಕ್ಗೆ ಹಣ ಸಿಗಬೇಕು. ಮಂಗಳೂರು, ತುಮಕೂರು, ವಿಜಯಪುರ ಡಿಸಿಸಿ ಬ್ಯಾಂಕ್ಗಳು ಹಾಗೂ ಅಪೆಕ್ಸ್ ಬ್ಯಾಂಕಿನವರು ಹಣ ವಸೂಲಿ ಮಾಡಬೇಕು. ಈ ವಿಷಯದಲ್ಲಿ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.