<p><strong>ಬೆಳಗಾವಿ</strong>: ಸಚಿವ ಸತೀಶ ಜಾರಕಿಹೊಳಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಫಿರೋಜ್ ಸೇಠ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಭೇಟಿ ನೀಡಿದರು.</p><p>'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶಕ್ಕೆ ಆಹ್ವಾನ ನೀಡುವ ನೆಪದಲ್ಲಿ ಫಿರೋಜ್ ಮನೆಗೆ ಹೋಗಿ, 15 ನಿಮಿಷ ಮಾತುಕತೆ ನಡೆಸಿದರು. ಉಪಾಹಾರ ಸೇವಿಸಿದರು.</p><p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಫಿರೋಜ್ ಸೇಠ್ ಅವರು, ಸತೀಶ ವಿರುದ್ಧ ಮುನಿಸಿಕೊಂಡಿದ್ದರು. ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು.</p><p>ಸತೀಶ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡ ಫಿರೋಜ್ ಅವರ ಸಹೋದರ, ಶಾಸಕ ಆಸಿಫ್ ಸೇಠ್, ಸಚಿವ ಎಂ.ಸಿ.ಸುಧಾಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ವೇಳೆ ಹಾಜರಿದ್ದರು.</p><p>'ಹಲವು ದಶಕಗಳಿಂದಲೂ ಕಾಂಗ್ರೆಸ್ನೊಂದಿಗೆ ನಮ್ಮ ಕುಟುಂಬ ಗುರುತಿಸಿಕೊಂಡಿದೆ. ಎರಡು ಅವಧಿಗೆ ಶಾಸಕನಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಬೆಳವಣಿಗೆಗಾಗಿ ದುಡಿದಿದ್ದೇನೆ. ಸೌಹಾರ್ದ ಭೇಟಿಗಾಗಿ ಶಿವಕುಮಾರ್ ಇಂದು ಮನೆಗೆ ಬಂದಿದ್ದಾರಷ್ಟೇ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ' ಎಂದು ಫಿರೋಜ್ ಸೇಠ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p><p>'ಸತೀಶ ಜಾರಕಿಹೊಳಿ, ನನ್ನ ಮಧ್ಯೆ ಯಾವುದೇ ವೈಮನಸ್ಸು ಇಲ್ಲ' ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸಚಿವ ಸತೀಶ ಜಾರಕಿಹೊಳಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಫಿರೋಜ್ ಸೇಠ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಭೇಟಿ ನೀಡಿದರು.</p><p>'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶಕ್ಕೆ ಆಹ್ವಾನ ನೀಡುವ ನೆಪದಲ್ಲಿ ಫಿರೋಜ್ ಮನೆಗೆ ಹೋಗಿ, 15 ನಿಮಿಷ ಮಾತುಕತೆ ನಡೆಸಿದರು. ಉಪಾಹಾರ ಸೇವಿಸಿದರು.</p><p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಫಿರೋಜ್ ಸೇಠ್ ಅವರು, ಸತೀಶ ವಿರುದ್ಧ ಮುನಿಸಿಕೊಂಡಿದ್ದರು. ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು.</p><p>ಸತೀಶ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡ ಫಿರೋಜ್ ಅವರ ಸಹೋದರ, ಶಾಸಕ ಆಸಿಫ್ ಸೇಠ್, ಸಚಿವ ಎಂ.ಸಿ.ಸುಧಾಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ವೇಳೆ ಹಾಜರಿದ್ದರು.</p><p>'ಹಲವು ದಶಕಗಳಿಂದಲೂ ಕಾಂಗ್ರೆಸ್ನೊಂದಿಗೆ ನಮ್ಮ ಕುಟುಂಬ ಗುರುತಿಸಿಕೊಂಡಿದೆ. ಎರಡು ಅವಧಿಗೆ ಶಾಸಕನಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಬೆಳವಣಿಗೆಗಾಗಿ ದುಡಿದಿದ್ದೇನೆ. ಸೌಹಾರ್ದ ಭೇಟಿಗಾಗಿ ಶಿವಕುಮಾರ್ ಇಂದು ಮನೆಗೆ ಬಂದಿದ್ದಾರಷ್ಟೇ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ' ಎಂದು ಫಿರೋಜ್ ಸೇಠ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. </p><p>'ಸತೀಶ ಜಾರಕಿಹೊಳಿ, ನನ್ನ ಮಧ್ಯೆ ಯಾವುದೇ ವೈಮನಸ್ಸು ಇಲ್ಲ' ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>