<p><strong>ಅಥಣಿ: </strong>‘ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಂಡು ಅವರ ಏಳಿಗೆ ಬಯಸುತ್ತಾ ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸುವವನೇ ನಿಜವಾದ ಶಿಕ್ಷಕ’ ಎಂದು ಮುಖಂಡ ಸಿ.ಎ. ಇಟ್ನಾಳಮಠ ಹೇಳಿದರು.</p>.<p>ಇಲ್ಲಿನ ಕಾಶಿಬಾಯಿ ಚಿಕ್ಕಟ್ಟಿ ಇಂಗ್ಲಿಷ್ ಮಾಧ್ಯಮ ಶಾಲೆಯಿಂದ ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿಯರಿಗೆ 2020-21ನೇ ಸಾಲಿನ ‘ದಕ್ಷ ಶಿಕ್ಷಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆ ಶಿಕ್ಷಕರು ಅವರ ಮಕ್ಕಳನ್ನು ಕೂಡ ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದರು.</p>.<p>ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ್ ಚಿಕ್ಕಟ್ಟಿ, ‘ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ದಕ್ಷ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ನಮ್ಮ ಸಂಸ್ಥೆಯಿಂದ ಕೊಡುತ್ತಾ ಬಂದಿದ್ದೇವೆ’ ಎಂದು ತಿಳಿಸಿದರು.</p>.<p>ಮಂಗಸೂಳಿ ಸ.ಹಿ.ಪ್ರಾ. ಶಾಲೆಯ ರುಕ್ಮಿಣಿ ನಾಯ್ಕರ್, ಹಲ್ಯಾಳದ ಸ.ಪ್ರೌಢಶಾಲೆಯ ನಾಗಪ್ಪ ಎಸ್. ಉಗಾರ, ಅರುಣ ತುಕಾರಾಮ್ ಜಾಧವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಸುವರ್ಣಾ ಗಡದೆ ಅವರಿಗೆ ‘ಕಾಮ್ಸ್’ ಒಕ್ಕೂಟಗಳ ವತಿಯಿಂದ ‘ಗುರು ಸೇವಾ ರತ್ನ’ ನೀಡಲಾಯಿತು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಣ್ಣ ಧರಿಗೌಡ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ, ಬಿಆರ್ಸಿ ಎಸ್.ಎ. ಸನದಿ, ಎಸ್.ಎನ್. ಚಿಕ್ಕಮಠ, ಕಿರಣ ಬುರ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: </strong>‘ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಂಡು ಅವರ ಏಳಿಗೆ ಬಯಸುತ್ತಾ ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸುವವನೇ ನಿಜವಾದ ಶಿಕ್ಷಕ’ ಎಂದು ಮುಖಂಡ ಸಿ.ಎ. ಇಟ್ನಾಳಮಠ ಹೇಳಿದರು.</p>.<p>ಇಲ್ಲಿನ ಕಾಶಿಬಾಯಿ ಚಿಕ್ಕಟ್ಟಿ ಇಂಗ್ಲಿಷ್ ಮಾಧ್ಯಮ ಶಾಲೆಯಿಂದ ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿಯರಿಗೆ 2020-21ನೇ ಸಾಲಿನ ‘ದಕ್ಷ ಶಿಕ್ಷಕ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆ ಶಿಕ್ಷಕರು ಅವರ ಮಕ್ಕಳನ್ನು ಕೂಡ ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದರು.</p>.<p>ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ್ ಚಿಕ್ಕಟ್ಟಿ, ‘ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ದಕ್ಷ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ನಮ್ಮ ಸಂಸ್ಥೆಯಿಂದ ಕೊಡುತ್ತಾ ಬಂದಿದ್ದೇವೆ’ ಎಂದು ತಿಳಿಸಿದರು.</p>.<p>ಮಂಗಸೂಳಿ ಸ.ಹಿ.ಪ್ರಾ. ಶಾಲೆಯ ರುಕ್ಮಿಣಿ ನಾಯ್ಕರ್, ಹಲ್ಯಾಳದ ಸ.ಪ್ರೌಢಶಾಲೆಯ ನಾಗಪ್ಪ ಎಸ್. ಉಗಾರ, ಅರುಣ ತುಕಾರಾಮ್ ಜಾಧವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಸುವರ್ಣಾ ಗಡದೆ ಅವರಿಗೆ ‘ಕಾಮ್ಸ್’ ಒಕ್ಕೂಟಗಳ ವತಿಯಿಂದ ‘ಗುರು ಸೇವಾ ರತ್ನ’ ನೀಡಲಾಯಿತು.</p>.<p>ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಣ್ಣ ಧರಿಗೌಡ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ, ಬಿಆರ್ಸಿ ಎಸ್.ಎ. ಸನದಿ, ಎಸ್.ಎನ್. ಚಿಕ್ಕಮಠ, ಕಿರಣ ಬುರ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>