<p><strong>ಬೆಳಗಾವಿ:</strong> ‘ತಾಲ್ಲೂಕಿನ ‘ಅಷ್ಟೇ’ ಗ್ರಾಮದಲ್ಲಿ ದಲಿತರ ಸ್ಮಶಾನ ಭೂಮಿ ವಿವಾದ ಬಗೆಹರಿಸಿ, ಸರ್ಕಾರದ ನಿರ್ದೇಶನದಂತೆ ಜಾಗ ಒದಗಿಸಬೇಕು’ ಎಂದು ಆಗ್ರಹಿಸಿ ಗ್ರಾಮದ ಡಾ.ಅಂಬೇಡ್ಕರ್ ಶಕ್ತಿ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ತಹಶೀಲ್ದಾರ್ ವಿರುದ್ಧ ಘೋಷಣೆ ಕೂಗಿದರು.</p>.<p>‘ಕೂಡಲೇ ಭೂಮಿ ಹಸ್ತಾಂತರಿಸಬೇಕು. ತಹಶೀಲ್ದಾರ್ ಅನ್ನು ವರ್ಗಾವಣೆ ಮಾಡಬೇಕು. ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷ ಲಕ್ಷ್ಮಣ ಕೋಲಕಾರ ಮಾತನಾಡಿ, ‘ಗ್ರಾಮದಲ್ಲಿ ದಲಿತರ ಭೂಮಿಯನ್ನು ಬೇರೆಯವರು ಅತಿಕ್ರಮಿಸಿಕೊಂಡಿದ್ದಾರೆ. ಈ ವಿವಾದ ಬಗೆಹರಿಸುವಂತೆ ಹಲವು ದಿನಗಳಿಂದಲೂ ಮನವಿ ಸಲ್ಲಿಸುತ್ತಿದ್ದೇವೆ. ಅಧಿಕಾರವಿದ್ದರೂ ಉಪ ವಿಭಾಗಾಧಿಕಾರಿ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ. ತಹಶೀಲ್ದಾರ್ ಶೋಷಿತರ ಕೆಲಸಗಳತ್ತ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ದೂರಿದರು.</p>.<p>ಮಾರುತಿ ಕೋಲಕಾರ, ಸಾಹೀಲ್ ಮೇತ್ರಿ, ಲಕ್ಷ್ಮಣ ಮೇತ್ರಿ, ಉಮೇಶ ಕೋಲಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ತಾಲ್ಲೂಕಿನ ‘ಅಷ್ಟೇ’ ಗ್ರಾಮದಲ್ಲಿ ದಲಿತರ ಸ್ಮಶಾನ ಭೂಮಿ ವಿವಾದ ಬಗೆಹರಿಸಿ, ಸರ್ಕಾರದ ನಿರ್ದೇಶನದಂತೆ ಜಾಗ ಒದಗಿಸಬೇಕು’ ಎಂದು ಆಗ್ರಹಿಸಿ ಗ್ರಾಮದ ಡಾ.ಅಂಬೇಡ್ಕರ್ ಶಕ್ತಿ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ತಹಶೀಲ್ದಾರ್ ವಿರುದ್ಧ ಘೋಷಣೆ ಕೂಗಿದರು.</p>.<p>‘ಕೂಡಲೇ ಭೂಮಿ ಹಸ್ತಾಂತರಿಸಬೇಕು. ತಹಶೀಲ್ದಾರ್ ಅನ್ನು ವರ್ಗಾವಣೆ ಮಾಡಬೇಕು. ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷ ಲಕ್ಷ್ಮಣ ಕೋಲಕಾರ ಮಾತನಾಡಿ, ‘ಗ್ರಾಮದಲ್ಲಿ ದಲಿತರ ಭೂಮಿಯನ್ನು ಬೇರೆಯವರು ಅತಿಕ್ರಮಿಸಿಕೊಂಡಿದ್ದಾರೆ. ಈ ವಿವಾದ ಬಗೆಹರಿಸುವಂತೆ ಹಲವು ದಿನಗಳಿಂದಲೂ ಮನವಿ ಸಲ್ಲಿಸುತ್ತಿದ್ದೇವೆ. ಅಧಿಕಾರವಿದ್ದರೂ ಉಪ ವಿಭಾಗಾಧಿಕಾರಿ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ. ತಹಶೀಲ್ದಾರ್ ಶೋಷಿತರ ಕೆಲಸಗಳತ್ತ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ದೂರಿದರು.</p>.<p>ಮಾರುತಿ ಕೋಲಕಾರ, ಸಾಹೀಲ್ ಮೇತ್ರಿ, ಲಕ್ಷ್ಮಣ ಮೇತ್ರಿ, ಉಮೇಶ ಕೋಲಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>