ಸಂಘದ ಅಧ್ಯಕ್ಷ ಲಕ್ಷ್ಮಣ ಕೋಲಕಾರ ಮಾತನಾಡಿ, ‘ಗ್ರಾಮದಲ್ಲಿ ದಲಿತರ ಭೂಮಿಯನ್ನು ಬೇರೆಯವರು ಅತಿಕ್ರಮಿಸಿಕೊಂಡಿದ್ದಾರೆ. ಈ ವಿವಾದ ಬಗೆಹರಿಸುವಂತೆ ಹಲವು ದಿನಗಳಿಂದಲೂ ಮನವಿ ಸಲ್ಲಿಸುತ್ತಿದ್ದೇವೆ. ಅಧಿಕಾರವಿದ್ದರೂ ಉಪ ವಿಭಾಗಾಧಿಕಾರಿ ಸಮರ್ಪಕ ಕ್ರಮ ಕೈಗೊಳ್ಳುತ್ತಿಲ್ಲ. ತಹಶೀಲ್ದಾರ್ ಶೋಷಿತರ ಕೆಲಸಗಳತ್ತ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ದೂರಿದರು.