‘ಒಡೆದಲ್ಲಿ ಗ್ರಾಮ ಸಂಪೂರ್ಣ ಮುಳುಗಡೆಯಾಗಿ, ಪ್ರಾಣ ಹಾನಿ ಸಂಭವಿಸುತ್ತದೆ. ಮದ್ಲೂರ, ಬೆನಕಟ್ಟಿ, ಮಬನೂರ ಗ್ರಾಮದ ಸುಮಾರು ಸಾವಿರ ಹೆಕ್ಟೇರ್ಗೂ ಹೆಚ್ಚು ಜಮೀನು ಕೊಚ್ಚಿ ಹೋಗುತ್ತದೆ. 1996ರಲ್ಲಿ ಎಡೆಬಿಡದೆ ಸುರಿದ ಮಳೆಗೆ ಚೆಕ್ಡ್ಯಾಂ ಬಿರುಕು ಬಿಟ್ಟು ಹೊಲಗಳಿಗೆ ನುಗ್ಗಿ ಅಪಾರ ಹಾನಿಯಾಗಿತ್ತು. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ಅನಾಹುತ ಆಗುವುದನ್ನು ತಪ್ಪಿಸಿಬೇಕು. ಜನರ ಆತಂಕ ನಿವಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.