<p><strong>ಬೆಳಗಾವಿ:</strong> ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮೃತರಾದ ಏಳು ಮಂದಿಯ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗುರುವಾರ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ ತಲಾ ₹ 5 ಲಕ್ಷ ಮೊತ್ತದ ಪರಿಹಾರ ಚೆಕ್ಗಳನ್ನು ವಿತರಿಸಿದರು.</p>.<p>ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಬಾಲಕಿಯರು ಸೇರಿದಂತೆ 6 ಮಂದಿ ಹಾಗೂ ಎದುರು ಮನೆಯ ಬಾಲಕಿ ಬುಧವಾರ ಸಾವಿಗೀಡಾಗಿದ್ದರು. ಅವರಿಗೆ ತಲಾ ₹ 5 ಲಕ್ಷದಂತೆ ಒಟ್ಟು ₹ 35 ಲಕ್ಷ ಪರಿಹಾರವನ್ನು ಸರ್ಕಾರ ನೀಡಿದೆ.</p>.<p>ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಮಹಾನವಮಿ ಅಮಾವಾಸ್ಯೆ ದಿನ ಬಡಾಲ ಅಂಕಲಗಿಯಲ್ಲಿ ಬಡವರ ಮನೆ ಬಿದ್ದು ಏಳು ಮಂದಿ ಸಾವಿಗೀಡಾಗಿರುವುದು ನೋವಿನ ಸಂಗತಿ. ಆ ನೋವು ತುಂಬಿಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾವು ಪರಿಹಾರ ಕೊಡಬಹುದಷ್ಟೆ. ತಲಾ ₹ 5 ಲಕ್ಷದಂತೆ ಸರ್ಕಾರಿಂದ ಚೆಕ್ ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರೂ ವಿಷಯ ತಿಳಿದ ಕೂಡಲೇ ತಲಾ ₹ 2 ಲಕ್ಷದಂತೆ ಪರಿಹಾರ ಕೊಡಲು ಮಂಜೂರಾತಿ ನೀಡಿದ್ದಾರೆ. ಆ ಬಡ ಕುಟುಂಬದ ಹಾಗೂ ಸರ್ಕಾರದ ಪರವಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಮೂವರು ಮಕ್ಕಳಿಗೆ ತಲಾ ₹ 1 ಲಕ್ಷವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ಕೊಡಲಾಗುವುದು. ಆ ಕುಟುಂಬದವರ ನೋವಿನೊಂದಿಗೆ ಇರುತ್ತೇವೆ. ಬಿದ್ದಿರುವ ಮನೆ ಕಟ್ಟಿಕೊಳ್ಳುವುಕ್ಕೆ ₹ 5 ಲಕ್ಷ ಧನಸಹಾಯ ಮಾಡಲಾಗುವುದು’ ಎಂದರು.</p>.<p>‘ಯಾವ್ಯಾವ ಗ್ರಾಮಗಳಲ್ಲಿ ಮಳೆ ಜಾಸ್ತಿ ಆಗುತ್ತದೆಯೋ ಅಲ್ಲಿ ದುಃಸ್ಥಿತಿಯಲ್ಲಿರುವ ಅಥವಾ ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸಮೀಕ್ಷೆ ನಡೆಸಬೇಕು. ಆ ಮನೆಗಳವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಪಾಯದ ಪರಿಸ್ಥಿತಿಯಲ್ಲಿರುವ ಮನೆಗಳನ್ನು ದುರಸ್ತಿ ಮಾಡಿಸಿಕೊಡಬೇಕಾಗುತ್ತದೆ. ಸತ್ತ ಮೇಲೆ ಪರಿಹಾರ ಕೊಡುವುದು ಸಾಧುವಲ್ಲ. ಪ್ರಾಣ ಉಳಿಸಿಕೊಳ್ಳಲು ಆದ್ಯತೆ ನೀಡಬೇಕಾಗಿದೆ’ ಎಂದು ಹೇಳಿದರು.</p>.<p>‘ಚಿತ್ರದುರ್ಗ ದಾಟಿದ ನಂತರ ಬೀದರ್ವರೆಗೆ ಕಲ್ಲು–ಮಣ್ಣಿನ ಮನೆಗಳನ್ನೆ ಕಾಣುತ್ತೇವೆ. ಮುಂದಿನ ದಿನಗಳಲ್ಲಿ ಸಿಮೆಂಟ್ನಿಂದ ನಿರ್ಮಿಸಲು ಸರ್ಕಾರದಿಂದ ಸಹಾಯ–ಸಹಕಾರ ನೀಡಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಶಾಲಾ–ಕಾಲೇಜುಗಳ ದುರಸ್ತಿಗೆ ಅನುದಾನ ನೀಡಲಾಗಿದೆ. ದುರಸ್ತಿ ಪ್ರಗತಿಯಲ್ಲಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>ದುರ್ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಟ್ವೀಟ್ ಮಾಡಿದೆ. ಪಿಎಂಎನ್ಆರ್ಎಫ್ನಲ್ಲಿ ತಲಾ ₹ 2 ಲಕ್ಷ ಪರಿಹಾರ ಒದಗಿಸಲಾಗುವುದು’ ಎಂದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮೃತರಾದ ಏಳು ಮಂದಿಯ ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗುರುವಾರ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ ತಲಾ ₹ 5 ಲಕ್ಷ ಮೊತ್ತದ ಪರಿಹಾರ ಚೆಕ್ಗಳನ್ನು ವಿತರಿಸಿದರು.</p>.<p>ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಬಾಲಕಿಯರು ಸೇರಿದಂತೆ 6 ಮಂದಿ ಹಾಗೂ ಎದುರು ಮನೆಯ ಬಾಲಕಿ ಬುಧವಾರ ಸಾವಿಗೀಡಾಗಿದ್ದರು. ಅವರಿಗೆ ತಲಾ ₹ 5 ಲಕ್ಷದಂತೆ ಒಟ್ಟು ₹ 35 ಲಕ್ಷ ಪರಿಹಾರವನ್ನು ಸರ್ಕಾರ ನೀಡಿದೆ.</p>.<p>ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ಮಹಾನವಮಿ ಅಮಾವಾಸ್ಯೆ ದಿನ ಬಡಾಲ ಅಂಕಲಗಿಯಲ್ಲಿ ಬಡವರ ಮನೆ ಬಿದ್ದು ಏಳು ಮಂದಿ ಸಾವಿಗೀಡಾಗಿರುವುದು ನೋವಿನ ಸಂಗತಿ. ಆ ನೋವು ತುಂಬಿಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾವು ಪರಿಹಾರ ಕೊಡಬಹುದಷ್ಟೆ. ತಲಾ ₹ 5 ಲಕ್ಷದಂತೆ ಸರ್ಕಾರಿಂದ ಚೆಕ್ ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರೂ ವಿಷಯ ತಿಳಿದ ಕೂಡಲೇ ತಲಾ ₹ 2 ಲಕ್ಷದಂತೆ ಪರಿಹಾರ ಕೊಡಲು ಮಂಜೂರಾತಿ ನೀಡಿದ್ದಾರೆ. ಆ ಬಡ ಕುಟುಂಬದ ಹಾಗೂ ಸರ್ಕಾರದ ಪರವಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಮೂವರು ಮಕ್ಕಳಿಗೆ ತಲಾ ₹ 1 ಲಕ್ಷವನ್ನು ಮಕ್ಕಳ ಕಲ್ಯಾಣ ನಿಧಿಯಿಂದ ಕೊಡಲಾಗುವುದು. ಆ ಕುಟುಂಬದವರ ನೋವಿನೊಂದಿಗೆ ಇರುತ್ತೇವೆ. ಬಿದ್ದಿರುವ ಮನೆ ಕಟ್ಟಿಕೊಳ್ಳುವುಕ್ಕೆ ₹ 5 ಲಕ್ಷ ಧನಸಹಾಯ ಮಾಡಲಾಗುವುದು’ ಎಂದರು.</p>.<p>‘ಯಾವ್ಯಾವ ಗ್ರಾಮಗಳಲ್ಲಿ ಮಳೆ ಜಾಸ್ತಿ ಆಗುತ್ತದೆಯೋ ಅಲ್ಲಿ ದುಃಸ್ಥಿತಿಯಲ್ಲಿರುವ ಅಥವಾ ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸಮೀಕ್ಷೆ ನಡೆಸಬೇಕು. ಆ ಮನೆಗಳವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಪಾಯದ ಪರಿಸ್ಥಿತಿಯಲ್ಲಿರುವ ಮನೆಗಳನ್ನು ದುರಸ್ತಿ ಮಾಡಿಸಿಕೊಡಬೇಕಾಗುತ್ತದೆ. ಸತ್ತ ಮೇಲೆ ಪರಿಹಾರ ಕೊಡುವುದು ಸಾಧುವಲ್ಲ. ಪ್ರಾಣ ಉಳಿಸಿಕೊಳ್ಳಲು ಆದ್ಯತೆ ನೀಡಬೇಕಾಗಿದೆ’ ಎಂದು ಹೇಳಿದರು.</p>.<p>‘ಚಿತ್ರದುರ್ಗ ದಾಟಿದ ನಂತರ ಬೀದರ್ವರೆಗೆ ಕಲ್ಲು–ಮಣ್ಣಿನ ಮನೆಗಳನ್ನೆ ಕಾಣುತ್ತೇವೆ. ಮುಂದಿನ ದಿನಗಳಲ್ಲಿ ಸಿಮೆಂಟ್ನಿಂದ ನಿರ್ಮಿಸಲು ಸರ್ಕಾರದಿಂದ ಸಹಾಯ–ಸಹಕಾರ ನೀಡಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಶಾಲಾ–ಕಾಲೇಜುಗಳ ದುರಸ್ತಿಗೆ ಅನುದಾನ ನೀಡಲಾಗಿದೆ. ದುರಸ್ತಿ ಪ್ರಗತಿಯಲ್ಲಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>ದುರ್ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿ ಟ್ವೀಟ್ ಮಾಡಿದೆ. ಪಿಎಂಎನ್ಆರ್ಎಫ್ನಲ್ಲಿ ತಲಾ ₹ 2 ಲಕ್ಷ ಪರಿಹಾರ ಒದಗಿಸಲಾಗುವುದು’ ಎಂದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>