ಚವಾಟ್ ಗಲ್ಲಿಯ ಜ್ಯೋತಿಬಾ ಮಂದಿರದಿಂದ ಆರಂಭಗೊಂಡ ಪಲ್ಲಕ್ಕಿ ಹಾಗೂ ಅಲಂಕೃತ ಎತ್ತಿನ ಮೆರವಣಿಗೆ, ಗಣಪತ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ ಮಾರ್ಗವಾಗಿ ಸಂಚರಿಸಿ ಹುತಾತ್ಮ ಚೌಕ್ ತಲುಪಿತು. ಅಲ್ಲಿ ವಿವಿಧ ದೇವಸ್ಥಾನಗಳ 11 ಪಲ್ಲಕ್ಕಿಗಳು ಸಮಾವೇಶಗೊಂಡು, ಮೆರವಣಿಗೆ ಮೂಲಕ ವಿದ್ಯಾನಿಕೇತನ ಮೈದಾನಕ್ಕೆ ತೆರಳಿದವು. ಯುವಕ–ಯುವತಿಯರು, ಮಕ್ಕಳ ಜೈಕಾರ ಮುಗಿಲು ಮುಟ್ಟಿದ್ದವು. ಅಲ್ಲಿ ಧಾರ್ಮಿಕ ಆಚರಣೆ ಕೈಗೊಂಡ ನಂತರ, ಬನ್ನಿ ಮುಡಿದು ದಸರಾ ಆಚರಣೆಗೆ ತೆರೆ ಎಳೆದರು.