<p><strong>ಮೂಡಲಗಿ:</strong> ನಾಡಹಬ್ಬ ದಸರಾ ಉತ್ಸವವನ್ನು ಉದ್ಘಾಟಿಸಲಿರುವ ಸಾಹಿತಿ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿರುವುದು ಸರಿಯಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.</p>.<p>ಭಾನುವಾರ ಮೂಡಲಗಿಯ ರಡ್ಡಿ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೈಸೂರ ದಸರಾವನ್ನು ಸಂಕುಚಿತವಾಗಿ ನೋಡದೆ ವಿಶಾಲ ಮನೋಭಾವದಿಂದ ನೋಡಬೇಕು. ಜಾತ್ಯಾತೀತ ರಾಷ್ಟ್ರದಲ್ಲಿ ಉತ್ಸವಗಳನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕು ಎನ್ನವುದು ತಪ್ಪು ಎಂದರು.</p>.<p>ಶ್ರೇಷ್ಠವಾಗಿರುವ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ದಸರಾ ಉತ್ಸವದಲ್ಲಿ ಜಾತಿ, ಮತ, ಪಂಥ, ಧರ್ಮದ ಥಳಕು ಹಾಕಬಾರದು. ಧರ್ಮದ ಹೆಸರಿನಲ್ಲಿ ಕಿತ್ತಾಟ ಆಗಬಾರದು. ಮೈಸೂರು ಮಹಾರಾಜರು ಅಲ್ಪಸಂಖ್ಯಾತರನ್ನು ಕರೆದುಕೊಂಡು ದಸರಾ ಉತ್ಸವವನ್ನು ಮಾಡಿರುವುದು ಇದೆ. ದಸರಾ ಹಬ್ಬ ಕ್ಷುಲ್ಲಕ ರಾಜಕೀಯದಿಂದ ಮುಕ್ತವಾಗಬೇಕು. ಆ ಮೂಲಕ ಕನ್ನಡ ಸಂಸ್ಕೃತಿಯನ್ನು ಅಭಿವ್ಯಕ್ತಪಡಿಸಿಬೇಕು. ಅಂತರ್ರಾಷ್ಟ್ರೀಯವಾಗಿ ಪ್ರಸಿದ್ಧಿಯನ್ನು ಹೊಂದಿರುವ ದಸರಾ ಉತ್ಸವಕ್ಕೆ ಹಿರಿಮೆ ಬರುವಂತೆ ನಾಡಿನ ಜನರು ರಾಜಕೀಯವನ್ನು ಬಿಟ್ಟು ವರ್ತಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ನಾಡಹಬ್ಬ ದಸರಾ ಉತ್ಸವವನ್ನು ಉದ್ಘಾಟಿಸಲಿರುವ ಸಾಹಿತಿ ಬಾನು ಮುಸ್ತಾಕ್ ಅವರನ್ನು ಆಹ್ವಾನಿಸಿರುವುದು ಸರಿಯಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.</p>.<p>ಭಾನುವಾರ ಮೂಡಲಗಿಯ ರಡ್ಡಿ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೈಸೂರ ದಸರಾವನ್ನು ಸಂಕುಚಿತವಾಗಿ ನೋಡದೆ ವಿಶಾಲ ಮನೋಭಾವದಿಂದ ನೋಡಬೇಕು. ಜಾತ್ಯಾತೀತ ರಾಷ್ಟ್ರದಲ್ಲಿ ಉತ್ಸವಗಳನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕು ಎನ್ನವುದು ತಪ್ಪು ಎಂದರು.</p>.<p>ಶ್ರೇಷ್ಠವಾಗಿರುವ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ದಸರಾ ಉತ್ಸವದಲ್ಲಿ ಜಾತಿ, ಮತ, ಪಂಥ, ಧರ್ಮದ ಥಳಕು ಹಾಕಬಾರದು. ಧರ್ಮದ ಹೆಸರಿನಲ್ಲಿ ಕಿತ್ತಾಟ ಆಗಬಾರದು. ಮೈಸೂರು ಮಹಾರಾಜರು ಅಲ್ಪಸಂಖ್ಯಾತರನ್ನು ಕರೆದುಕೊಂಡು ದಸರಾ ಉತ್ಸವವನ್ನು ಮಾಡಿರುವುದು ಇದೆ. ದಸರಾ ಹಬ್ಬ ಕ್ಷುಲ್ಲಕ ರಾಜಕೀಯದಿಂದ ಮುಕ್ತವಾಗಬೇಕು. ಆ ಮೂಲಕ ಕನ್ನಡ ಸಂಸ್ಕೃತಿಯನ್ನು ಅಭಿವ್ಯಕ್ತಪಡಿಸಿಬೇಕು. ಅಂತರ್ರಾಷ್ಟ್ರೀಯವಾಗಿ ಪ್ರಸಿದ್ಧಿಯನ್ನು ಹೊಂದಿರುವ ದಸರಾ ಉತ್ಸವಕ್ಕೆ ಹಿರಿಮೆ ಬರುವಂತೆ ನಾಡಿನ ಜನರು ರಾಜಕೀಯವನ್ನು ಬಿಟ್ಟು ವರ್ತಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>