ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಸೋಹ‌ ದಿನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Last Updated 21 ಜನವರಿ 2022, 7:56 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ‘ದಾಸೋಹ ದಿನ’ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಶುಕ್ರವಾರ ಆಚರಿಸಲಾಯಿತು.

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ‘ದಾಸೋಹ ದಿನ‘ವನ್ನಾಗಿ ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಫೋಟೊಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪೂಜೆ‌ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.

ಇದೇ ವೇಳೆ ಅಂಬಿಗರ ‌ಚೌಡಯ್ಯನವರ ಫೋಟೊಗೂ ಪೂಜೆ ಸಲ್ಲಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ನಡೆಸಲಾಯಿತು.

ಸಮಾಜದ ಮುಖಂಡರಾದ ಜಿ.ಜಿ. ತಳವಾರ, ಬಸವರಾಜ ಸುಣಗಾರ, ರವಿಶಂಕರ ಚನಾಳ, ರಮೇಶ ಘಸ್ತಿ, ವಿಠ್ಠಲ ಸುಣಗಾರ, ಮಹಾಬಲೇಶ್ವರ ಸಾಬಣ್ಣವರ, ಎಚ್.ಟಿ. ವಾಲೀಕಾರ, ಬಿ. ಸುರೇಖಾ, ವಿಜಯ ಹೊಂಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT