<p><strong>ಬೆಳಗಾವಿ:</strong> ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ‘ದಾಸೋಹ ದಿನ’ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಶುಕ್ರವಾರ ಆಚರಿಸಲಾಯಿತು.</p>.<p>ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ‘ದಾಸೋಹ ದಿನ‘ವನ್ನಾಗಿ ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಫೋಟೊಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪೂಜೆ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.</p>.<p>ಇದೇ ವೇಳೆ ಅಂಬಿಗರ ಚೌಡಯ್ಯನವರ ಫೋಟೊಗೂ ಪೂಜೆ ಸಲ್ಲಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ನಡೆಸಲಾಯಿತು.</p>.<p>ಸಮಾಜದ ಮುಖಂಡರಾದ ಜಿ.ಜಿ. ತಳವಾರ, ಬಸವರಾಜ ಸುಣಗಾರ, ರವಿಶಂಕರ ಚನಾಳ, ರಮೇಶ ಘಸ್ತಿ, ವಿಠ್ಠಲ ಸುಣಗಾರ, ಮಹಾಬಲೇಶ್ವರ ಸಾಬಣ್ಣವರ, ಎಚ್.ಟಿ. ವಾಲೀಕಾರ, ಬಿ. ಸುರೇಖಾ, ವಿಜಯ ಹೊಂಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ‘ದಾಸೋಹ ದಿನ’ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಶುಕ್ರವಾರ ಆಚರಿಸಲಾಯಿತು.</p>.<p>ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು ‘ದಾಸೋಹ ದಿನ‘ವನ್ನಾಗಿ ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಫೋಟೊಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪೂಜೆ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.</p>.<p>ಇದೇ ವೇಳೆ ಅಂಬಿಗರ ಚೌಡಯ್ಯನವರ ಫೋಟೊಗೂ ಪೂಜೆ ಸಲ್ಲಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ನಡೆಸಲಾಯಿತು.</p>.<p>ಸಮಾಜದ ಮುಖಂಡರಾದ ಜಿ.ಜಿ. ತಳವಾರ, ಬಸವರಾಜ ಸುಣಗಾರ, ರವಿಶಂಕರ ಚನಾಳ, ರಮೇಶ ಘಸ್ತಿ, ವಿಠ್ಠಲ ಸುಣಗಾರ, ಮಹಾಬಲೇಶ್ವರ ಸಾಬಣ್ಣವರ, ಎಚ್.ಟಿ. ವಾಲೀಕಾರ, ಬಿ. ಸುರೇಖಾ, ವಿಜಯ ಹೊಂಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>