<p><strong>ಬೆಳಗಾವಿ:</strong> ‘ಕೋವಿಡ್–19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪರಿಹಾರ ಧನ ಘೋಷಿಸಿದೆ. ಅದನ್ನು ಎಲ್ಲ ಅರ್ಹ ಕಾರ್ಮಿಕರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಾಕೀತು ಮಾಡಿದರು.</p>.<p>ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಇಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕ್ಷೌರಿಕರು, ಅಗಸರು, ಟೈಲರ್ಗಳು, ಹಮಾಲಿ, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್, ಕಮ್ಮಾರರು, ಗೃಹ ಕಾರ್ಮಿಕ (ಮನೆಗೆಲಸದವರು)ರು ಹಾಗೂ ಚಮ್ಮಾರರಿಗೆ ತಲಾ ₹ 2ಸಾವಿರ ಪರಿಹಾರ ಘೋಷಿಸಲಾಗಿದೆ. ಅರ್ಹ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಆಯಾ ಕಾರ್ಮಿಕ ಸಂಘ-ಸಂಸ್ಥೆಗಳವರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೆರವಾಗಬೇಕು. ಮಾರ್ಗಸೂಚಿ ಅನುಸರಿಸಬೇಕು’ ಎಂದು ಸೂಚಿಸಿದರು.</p>.<p class="Subhead">ಉದ್ಯೋಗ ದೃಢೀಕರಣ ಪತ್ರ ನೀಡಿ:</p>.<p>‘ಅರ್ಜಿ ಸಲ್ಲಿಸುವ ಕಾರ್ಮಿಕರಿಗೆ ಸ್ವಯಂಘೋಷಣೆ ಪತ್ರ ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ಉದ್ಯೋಗ ದೃಢೀಕರಣ ಪತ್ರ ನೀಡಲಿದ್ದಾರೆ. ವಿನಾಕಾರಣ ಅರ್ಜಿದಾರರನ್ನು ಶತಾಯಿಸಬಾರದು. ಸ್ಥಳೀಯವಾಗಿ ಕೆಲಸ ಮಾಡುವ ಕಾರ್ಮಿಕರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಇದನ್ನು ಆಧರಿಸಿ ಉದ್ಯೋಗ ದೃಢೀಕರಣ ಪತ್ರ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾರ್ಮಿಕರ ಸಂಘಟನೆಗಳು ಒಂದೇ ಕಡೆ ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡಬೇಕು. ಆಗ ಕಾರ್ಮಿಕ ಇಲಾಖೆಯ ಅಧಿಕಾರಿಗಳೇ ಆ ಸ್ಥಳಗಳಿಗೆ ಬಂದು ನೆರವು ನೀಡಲಿದ್ದಾರೆ’ ಎಂದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ‘ಸೇವಾಸಿಂಧು ಮೂಲಕ ಅಪ್ಲೋಡ್ ಮಾಡಿದರೆ ಅವರ ಅರ್ಜಿ ನೇರವಾಗಿ ಕಾರ್ಮಿಕ ಇಲಾಖೆಗೆ ಬರುತ್ತದೆ. ಈವರೆಗೆ 1,112 ಅರ್ಜಿಗಳು ಬಂದಿದ್ದು, ನಿಯಮಾವಳಿ ಪ್ರಕಾರ ಪರಿಶೀಲಿಸಿ ಪರಿಹಾರ ಮಂಜೂರು ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.</p>.<p class="Briefhead">‘ಏಜೆಂಟರ ಮಧ್ಯಸ್ಥಿಕೆಗೆ ಅವಕಾಶ ಬೇಡ’</p>.<p>‘ಪರಿಹಾರ ತಲುಪಿಸುವಲ್ಲಿ ಯಾವುದೇ ಕಾರಣಕ್ಕೂ ಏಜೆಂಟರು ಮಧ್ಯಸ್ಥಿಕೆ ವಹಿಸದಂತೆ ಎಚ್ಚರ ವಹಿಸಬೇಕು’ ಎಂದು ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>‘ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಅವರಿಗೆ ನೆರವು ತಲುಪಿಸುವುದು ಸುಲಭ. ಅಂತೆಯೇ ಅಸಂಘಟಿತ ಕಾರ್ಮಿಕರಿಗೆ ಕೂಡ ತಲುಪಿಸಬೇಕು. ಅಗತ್ಯ ಪ್ರಮಾಣಪತ್ರ ನೀಡಲು ಇತರ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಆದಷ್ಟು ಬೇಗನೆ ನೆರವು ತಲುಪಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು–ಕಾರ್ಮಿಕ ಸಂಘಟನೆಗಳ ಮುಖಂಡರು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕು ಮಟ್ಟದಲ್ಲಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿರುವ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ನೆರವು ತಲುಪಿಸಬೇಕು. ಕಳೆದ ಬಾರಿ ಯಾವ ಮಾನದಂಡ ಆಧರಿಸಿ ಉದ್ಯೋಗ ಪ್ರಮಾಣಪತ್ರ ನೀಡಬೇಕು ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಆದ್ದರಿಂದ ಕೆಲವು ಕಡೆ ವಿಳಂಬವಾಗಿದೆ. ಆದರೆ, ಈ ಬಾರಿ ಸ್ವಯಂ ಘೋಷಣೆ ಆಧರಿಸಿ ಉದ್ಯೋಗ ಪ್ರಮಾಣಪತ್ರ ನೀಡಬೇಕು ಎಂದು ಸೂಚಿಸಲಾಗುವುದು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್ ಹೇಳಿದರು.</p>.<p class="Briefhead"><strong>ಮುಖಂಡರು ಹೇಳಿದ್ದೇನು?</strong></p>.<p>* ಸರ್ಕಾರ ಘೋಷಿಸಿರುವ ನೆರವು ಪಡೆಯಲು ನಿಗದಿಪಡಿಸಿರುವ ಪ್ರಕ್ರಿಯೆ ಕ್ಲಿಷ್ಟಕರವಾಗಿದೆ.</p>.<p>* ಇದನ್ನು ಸರಳೀಕರಿಸಿದಾಗ ಮಾತ್ರ ಅಸಂಘಟಿತ ಕಾರ್ಮಿಕರು ಪ್ರಯೋಜನ ಪಡೆಯಬಹುದು.</p>.<p>* ಒಟಿಪಿ ಬದಲಿಗೆ ಸರಳ ಪ್ರಕ್ರಿಯೆ ಅನುಸರಿಸಬೇಕು.</p>.<p>* ಕ್ಷೌರಿಕ ವೃತ್ತಿನಿರತರಿಗೆ ಕೂಡ ಕೋವಿಡ್ ನಿರೋಧಕ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೋವಿಡ್–19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪರಿಹಾರ ಧನ ಘೋಷಿಸಿದೆ. ಅದನ್ನು ಎಲ್ಲ ಅರ್ಹ ಕಾರ್ಮಿಕರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಾಕೀತು ಮಾಡಿದರು.</p>.<p>ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಇಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕ್ಷೌರಿಕರು, ಅಗಸರು, ಟೈಲರ್ಗಳು, ಹಮಾಲಿ, ಚಿಂದಿ ಆಯುವವರು, ಕುಂಬಾರರು, ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್, ಕಮ್ಮಾರರು, ಗೃಹ ಕಾರ್ಮಿಕ (ಮನೆಗೆಲಸದವರು)ರು ಹಾಗೂ ಚಮ್ಮಾರರಿಗೆ ತಲಾ ₹ 2ಸಾವಿರ ಪರಿಹಾರ ಘೋಷಿಸಲಾಗಿದೆ. ಅರ್ಹ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಆಯಾ ಕಾರ್ಮಿಕ ಸಂಘ-ಸಂಸ್ಥೆಗಳವರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನೆರವಾಗಬೇಕು. ಮಾರ್ಗಸೂಚಿ ಅನುಸರಿಸಬೇಕು’ ಎಂದು ಸೂಚಿಸಿದರು.</p>.<p class="Subhead">ಉದ್ಯೋಗ ದೃಢೀಕರಣ ಪತ್ರ ನೀಡಿ:</p>.<p>‘ಅರ್ಜಿ ಸಲ್ಲಿಸುವ ಕಾರ್ಮಿಕರಿಗೆ ಸ್ವಯಂಘೋಷಣೆ ಪತ್ರ ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ಉದ್ಯೋಗ ದೃಢೀಕರಣ ಪತ್ರ ನೀಡಲಿದ್ದಾರೆ. ವಿನಾಕಾರಣ ಅರ್ಜಿದಾರರನ್ನು ಶತಾಯಿಸಬಾರದು. ಸ್ಥಳೀಯವಾಗಿ ಕೆಲಸ ಮಾಡುವ ಕಾರ್ಮಿಕರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಇದನ್ನು ಆಧರಿಸಿ ಉದ್ಯೋಗ ದೃಢೀಕರಣ ಪತ್ರ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾರ್ಮಿಕರ ಸಂಘಟನೆಗಳು ಒಂದೇ ಕಡೆ ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡಬೇಕು. ಆಗ ಕಾರ್ಮಿಕ ಇಲಾಖೆಯ ಅಧಿಕಾರಿಗಳೇ ಆ ಸ್ಥಳಗಳಿಗೆ ಬಂದು ನೆರವು ನೀಡಲಿದ್ದಾರೆ’ ಎಂದರು.</p>.<p>ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ, ‘ಸೇವಾಸಿಂಧು ಮೂಲಕ ಅಪ್ಲೋಡ್ ಮಾಡಿದರೆ ಅವರ ಅರ್ಜಿ ನೇರವಾಗಿ ಕಾರ್ಮಿಕ ಇಲಾಖೆಗೆ ಬರುತ್ತದೆ. ಈವರೆಗೆ 1,112 ಅರ್ಜಿಗಳು ಬಂದಿದ್ದು, ನಿಯಮಾವಳಿ ಪ್ರಕಾರ ಪರಿಶೀಲಿಸಿ ಪರಿಹಾರ ಮಂಜೂರು ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಕಾರ್ಮಿಕ ಅಧಿಕಾರಿ ತರನ್ನುಂ ಬೆಂಗಾಲಿ ಇದ್ದರು.</p>.<p class="Briefhead">‘ಏಜೆಂಟರ ಮಧ್ಯಸ್ಥಿಕೆಗೆ ಅವಕಾಶ ಬೇಡ’</p>.<p>‘ಪರಿಹಾರ ತಲುಪಿಸುವಲ್ಲಿ ಯಾವುದೇ ಕಾರಣಕ್ಕೂ ಏಜೆಂಟರು ಮಧ್ಯಸ್ಥಿಕೆ ವಹಿಸದಂತೆ ಎಚ್ಚರ ವಹಿಸಬೇಕು’ ಎಂದು ಹಿರೇಮಠ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>‘ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಅವರಿಗೆ ನೆರವು ತಲುಪಿಸುವುದು ಸುಲಭ. ಅಂತೆಯೇ ಅಸಂಘಟಿತ ಕಾರ್ಮಿಕರಿಗೆ ಕೂಡ ತಲುಪಿಸಬೇಕು. ಅಗತ್ಯ ಪ್ರಮಾಣಪತ್ರ ನೀಡಲು ಇತರ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಆದಷ್ಟು ಬೇಗನೆ ನೆರವು ತಲುಪಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು–ಕಾರ್ಮಿಕ ಸಂಘಟನೆಗಳ ಮುಖಂಡರು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕು ಮಟ್ಟದಲ್ಲಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಲ್ಲಿರುವ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ನೆರವು ತಲುಪಿಸಬೇಕು. ಕಳೆದ ಬಾರಿ ಯಾವ ಮಾನದಂಡ ಆಧರಿಸಿ ಉದ್ಯೋಗ ಪ್ರಮಾಣಪತ್ರ ನೀಡಬೇಕು ಎಂಬ ಬಗ್ಗೆ ಮಾಹಿತಿ ಇರಲಿಲ್ಲ. ಆದ್ದರಿಂದ ಕೆಲವು ಕಡೆ ವಿಳಂಬವಾಗಿದೆ. ಆದರೆ, ಈ ಬಾರಿ ಸ್ವಯಂ ಘೋಷಣೆ ಆಧರಿಸಿ ಉದ್ಯೋಗ ಪ್ರಮಾಣಪತ್ರ ನೀಡಬೇಕು ಎಂದು ಸೂಚಿಸಲಾಗುವುದು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್ ಹೇಳಿದರು.</p>.<p class="Briefhead"><strong>ಮುಖಂಡರು ಹೇಳಿದ್ದೇನು?</strong></p>.<p>* ಸರ್ಕಾರ ಘೋಷಿಸಿರುವ ನೆರವು ಪಡೆಯಲು ನಿಗದಿಪಡಿಸಿರುವ ಪ್ರಕ್ರಿಯೆ ಕ್ಲಿಷ್ಟಕರವಾಗಿದೆ.</p>.<p>* ಇದನ್ನು ಸರಳೀಕರಿಸಿದಾಗ ಮಾತ್ರ ಅಸಂಘಟಿತ ಕಾರ್ಮಿಕರು ಪ್ರಯೋಜನ ಪಡೆಯಬಹುದು.</p>.<p>* ಒಟಿಪಿ ಬದಲಿಗೆ ಸರಳ ಪ್ರಕ್ರಿಯೆ ಅನುಸರಿಸಬೇಕು.</p>.<p>* ಕ್ಷೌರಿಕ ವೃತ್ತಿನಿರತರಿಗೆ ಕೂಡ ಕೋವಿಡ್ ನಿರೋಧಕ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>