<p><strong>ಬೆಳಗಾವಿ:</strong> ‘ಸ್ಮಶಾನ ಭೂಮಿ ಒದಗಿಸಲು ಸರ್ಕಾರಿ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸುವಂತೆ ಎಲ್ಲ ತಹಶೀಲ್ದಾರ್ಗಳಿಗೆ ನಿರ್ದೇಶನ ನೀಡಲಾಗಿದ್ದು, ತಕ್ಷಣವೇ ಮಂಜೂರಾತಿ ಕೊಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಬೈಲಹೊಂಗಲ, ಅಥಣಿ ಹಾಗೂ ಇತರ ತಾಲ್ಲೂಕುಗಳಲ್ಲಿ ಸ್ಮಶಾನಕ್ಕೆ ಜಾಗ ನೀಡುವ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಪರೀಶಿಲನೆ ನಡೆಸಲಾಗಿದೆ. ಖಾಸಗಿ ಭೂ ಮಾಲೀಕರೂ ಸ್ವ ಇಚ್ಛೆಯಿಂದ ಜಾಗ ಕೊಡಬೇಕು’ ಎಂದರು.</p>.<p class="Subhead"><strong>ಮದಕರಿ ನಾಯಕ ಪ್ರತಿಮೆ: </strong>‘ನಗರದ ಆರ್.ಪಿ.ಡಿ. ವೃತ್ತದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ನಿಯಮಾವಳಿ ಪ್ರಕಾರ ಪ್ರಕ್ರಿಯೆ ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ನಿಪ್ಪಾಣಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಖರೀದಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದಿನ ಸಭೆಗಳಿಗೆ ಡಿ.ಎಸ್.ಪಿ.ಗಳು ಕೂಡ ಕಡ್ಡಾಯವಾಗಿ ಹಾಜರಾಗಬೇಕು’ ಎಂದು ಸೂಚಿಸಿದರು.</p>.<p>‘ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ 2021ರ ಫೆಬ್ರುವರಿಯಿಂದ ಮೇವರೆಗೆ ₹ 69 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ. ಬಾಕಿ ಇಲ್ಲ’ ಎಂದರು.</p>.<p class="Subhead"><strong>ಸಮರ್ಪಕ ತನಿಖೆಗೆ ಕ್ರಮ:</strong>‘ನ್ಯಾಯಾಲಯದಲ್ಲಿ ದೌರ್ಜನ್ಯ ಪ್ರಕರಣಗಳನ್ನು ಸಮರ್ಪಕ ನಿರ್ವಹಣೆಗೆ ಒಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ’ ಎಂದು ಎಎಸ್ಪಿ ಅಮರನಾಥ ರೆಡ್ಡಿ ತಿಳಿಸಿದರು.</p>.<p>ಡಿಸಿಪಿ ವಿಕ್ರಂ ಅಮಟೆ ಮಾತನಾಡಿ, ‘ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನಿಯಮಾವಳಿ ಪ್ರಕಾರ ತನಿಖೆ ಕೈಗೊಂಡು ದೋಷಾರೋಪ ಪಟ್ಟಿ ಸಲ್ಲಿಸಲಾಗುತ್ತಿದೆ. ಯಾವುದೇ ಪ್ರಕರಣಗಳಲ್ಲಿ ‘ಬಿ’ ವರದಿ ಹಾಕುವುದು ಸುಲಭವಲ್ಲ; ಹಿರಿಯ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸುತ್ತಾರೆ’ ಎಂದು ಸದಸ್ಯರ ಗಮನಕ್ಕೆ ತಂದರು.</p>.<p>ಸಮಿತಿಯ ಸದಸ್ಯ ಅಶೋಕ ಅಸೋದೆ, ‘ನೆರೆ ಮೊದಲಾದ ಕಾರಣದಿಂದ ನೂರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡಿದ್ದರೂ ಉತಾರ ಇಲ್ಲದಿರುವ ಕಾರಣಕ್ಕೆ ಪರಿಹಾರ ಮತ್ತಿತರ ಸೌಲಭ್ಯ ಸಿಗುತ್ತಿಲ್ಲ. ಅಂತಹ ಕುಟುಂಬಗಳಿಗೆ ಉತಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p class="Subhead"><strong>ವಿದ್ಯಾರ್ಥಿವೇತನ ಬಾಕಿ ಇದೆ:</strong> ‘ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಬಾಕಿ ಇದ್ದು, ಬೇಗ ಬಿಡುಗಡೆ ಮಾಡಬೇಕು’ ಎಂದು ಕೋರಿದರು. ‘ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಸದಸ್ಯ ಸುರೇಶ ತಳವಾರ, ‘ಕೋವಿಡ್ 2ನೇ ಅಲೆಯಲ್ಲಿ ಕೋವಿಡ್ನಿಂದ ಮೃತರಾದವರ ಕುಟುಂಬಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಹಾಯಧನ ನೀಡಲಾಗುತ್ತಿದೆ. ಅಂತೆಯೇ ಮೊದಲ ಅಲೆಯಲ್ಲಿ ಮೃತರಾದವರ ಕುಟುಂಬದವರಿಗೂ ಪರಿಹಾರ ದೊರಕಿಸಬೇಕು’ ಎಂದು ಆಗ್ರಹಿಸಿದರು.</p>.<p>ಸದಸ್ಯ ವಿಜಯ ತಳವಾರ ಮಾತನಾಡಿ, ‘ಸಾರ್ವಜನಿಕರಿಗೆ ಮುಕ್ತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದ್ದರೂ ಕೆಲ ರಾಜಕೀಯ ವ್ಯಕ್ತಿಗಳು ತಮಗೆ ಬೇಕಾದವರಿಗೆ ಮಾತ್ರ ಟೋಕನ್ ನೀಡುವ ಮೂಲಕ ಲಸಿಕಾಕರಣವನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ. ಸಿಇಒ ಎಚ್.ವಿ. ದರ್ಶನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸ್ಮಶಾನ ಭೂಮಿ ಒದಗಿಸಲು ಸರ್ಕಾರಿ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸುವಂತೆ ಎಲ್ಲ ತಹಶೀಲ್ದಾರ್ಗಳಿಗೆ ನಿರ್ದೇಶನ ನೀಡಲಾಗಿದ್ದು, ತಕ್ಷಣವೇ ಮಂಜೂರಾತಿ ಕೊಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಬೈಲಹೊಂಗಲ, ಅಥಣಿ ಹಾಗೂ ಇತರ ತಾಲ್ಲೂಕುಗಳಲ್ಲಿ ಸ್ಮಶಾನಕ್ಕೆ ಜಾಗ ನೀಡುವ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಪರೀಶಿಲನೆ ನಡೆಸಲಾಗಿದೆ. ಖಾಸಗಿ ಭೂ ಮಾಲೀಕರೂ ಸ್ವ ಇಚ್ಛೆಯಿಂದ ಜಾಗ ಕೊಡಬೇಕು’ ಎಂದರು.</p>.<p class="Subhead"><strong>ಮದಕರಿ ನಾಯಕ ಪ್ರತಿಮೆ: </strong>‘ನಗರದ ಆರ್.ಪಿ.ಡಿ. ವೃತ್ತದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ನಿಯಮಾವಳಿ ಪ್ರಕಾರ ಪ್ರಕ್ರಿಯೆ ಆರಂಭಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>‘ನಿಪ್ಪಾಣಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಖರೀದಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದಿನ ಸಭೆಗಳಿಗೆ ಡಿ.ಎಸ್.ಪಿ.ಗಳು ಕೂಡ ಕಡ್ಡಾಯವಾಗಿ ಹಾಜರಾಗಬೇಕು’ ಎಂದು ಸೂಚಿಸಿದರು.</p>.<p>‘ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ 2021ರ ಫೆಬ್ರುವರಿಯಿಂದ ಮೇವರೆಗೆ ₹ 69 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ. ಬಾಕಿ ಇಲ್ಲ’ ಎಂದರು.</p>.<p class="Subhead"><strong>ಸಮರ್ಪಕ ತನಿಖೆಗೆ ಕ್ರಮ:</strong>‘ನ್ಯಾಯಾಲಯದಲ್ಲಿ ದೌರ್ಜನ್ಯ ಪ್ರಕರಣಗಳನ್ನು ಸಮರ್ಪಕ ನಿರ್ವಹಣೆಗೆ ಒಬ್ಬ ಅಧಿಕಾರಿಯನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ’ ಎಂದು ಎಎಸ್ಪಿ ಅಮರನಾಥ ರೆಡ್ಡಿ ತಿಳಿಸಿದರು.</p>.<p>ಡಿಸಿಪಿ ವಿಕ್ರಂ ಅಮಟೆ ಮಾತನಾಡಿ, ‘ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನಿಯಮಾವಳಿ ಪ್ರಕಾರ ತನಿಖೆ ಕೈಗೊಂಡು ದೋಷಾರೋಪ ಪಟ್ಟಿ ಸಲ್ಲಿಸಲಾಗುತ್ತಿದೆ. ಯಾವುದೇ ಪ್ರಕರಣಗಳಲ್ಲಿ ‘ಬಿ’ ವರದಿ ಹಾಕುವುದು ಸುಲಭವಲ್ಲ; ಹಿರಿಯ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸುತ್ತಾರೆ’ ಎಂದು ಸದಸ್ಯರ ಗಮನಕ್ಕೆ ತಂದರು.</p>.<p>ಸಮಿತಿಯ ಸದಸ್ಯ ಅಶೋಕ ಅಸೋದೆ, ‘ನೆರೆ ಮೊದಲಾದ ಕಾರಣದಿಂದ ನೂರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡಿದ್ದರೂ ಉತಾರ ಇಲ್ಲದಿರುವ ಕಾರಣಕ್ಕೆ ಪರಿಹಾರ ಮತ್ತಿತರ ಸೌಲಭ್ಯ ಸಿಗುತ್ತಿಲ್ಲ. ಅಂತಹ ಕುಟುಂಬಗಳಿಗೆ ಉತಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p class="Subhead"><strong>ವಿದ್ಯಾರ್ಥಿವೇತನ ಬಾಕಿ ಇದೆ:</strong> ‘ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಬಾಕಿ ಇದ್ದು, ಬೇಗ ಬಿಡುಗಡೆ ಮಾಡಬೇಕು’ ಎಂದು ಕೋರಿದರು. ‘ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಸದಸ್ಯ ಸುರೇಶ ತಳವಾರ, ‘ಕೋವಿಡ್ 2ನೇ ಅಲೆಯಲ್ಲಿ ಕೋವಿಡ್ನಿಂದ ಮೃತರಾದವರ ಕುಟುಂಬಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಹಾಯಧನ ನೀಡಲಾಗುತ್ತಿದೆ. ಅಂತೆಯೇ ಮೊದಲ ಅಲೆಯಲ್ಲಿ ಮೃತರಾದವರ ಕುಟುಂಬದವರಿಗೂ ಪರಿಹಾರ ದೊರಕಿಸಬೇಕು’ ಎಂದು ಆಗ್ರಹಿಸಿದರು.</p>.<p>ಸದಸ್ಯ ವಿಜಯ ತಳವಾರ ಮಾತನಾಡಿ, ‘ಸಾರ್ವಜನಿಕರಿಗೆ ಮುಕ್ತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದ್ದರೂ ಕೆಲ ರಾಜಕೀಯ ವ್ಯಕ್ತಿಗಳು ತಮಗೆ ಬೇಕಾದವರಿಗೆ ಮಾತ್ರ ಟೋಕನ್ ನೀಡುವ ಮೂಲಕ ಲಸಿಕಾಕರಣವನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ. ಸಿಇಒ ಎಚ್.ವಿ. ದರ್ಶನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>