‘ಬೆಳಗಾವಿ ನಗರದಲ್ಲಿರುವ ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುವುದರಿಂದ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆ ಆಗಲಿದೆ. ಏಕೆಂದರೆ ನಗರದಿಂದ ಬಸ್ ಮೂಲಕ ಅಲ್ಲಿಗೆ ಹೋಗಬೇಕಾಗುತ್ತದೆ. ಬೇರೆ ಊರುಗಳಿಂದ ನಗರಕ್ಕೆ ಬಂದು, ಇಲ್ಲಿಂದ ಮತ್ತೆ ಅಲ್ಲಿ ಹೋಗಬೇಕಾಗುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.