ಅಂದು ಬೆಳಿಗ್ಗೆ ಗ್ರಾಮಕ್ಕೆ ತೆರಳಲಿರುವ ಜಿಲ್ಲಾಧಿಕಾರಿ, ಅಲ್ಲಿನ ಶಾಲೆ, ಗ್ರಾಮ ಪಂಚಾಯ್ತಿ, ಅಂಗನವಾಡಿ ಕೇಂದ್ರ ಮೊದಲಾದವುಗಳಿಗೆ ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿ ಗ್ರಾಮದ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಹಾಗೂ ಇತರ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳು ಮತ್ತು ಮಂಜೂರಾತಿ ಆದೇಶಗಳನ್ನು ವಿತರಿಸಲಿದ್ದಾರೆ.