<p><strong>ಬೆಳಗಾವಿ</strong>: ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಡಿಸಿಸಿ ಬ್ಯಾಂಕ್ನ ನಾಲ್ಕು ಕ್ಷೇತ್ರಗಳ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಮಾಜಿ ಸಂಸದರಾದ ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮತ್ತು ಮುಖಂಡ ನಾನಾಸಾಹೇಬ ಪಾಟೀಲ ಆಯ್ಕೆಯಾಗಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ನ 16 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆದರೆ, ಏಳು ಸ್ಥಾನಗಳಿಗೆ ಅ.19ರಂದು ಚುನಾವಣೆ ನಡೆದಿತ್ತು.</p>.<p>ಅಂದು ಸಂಜೆಯೇ ರಾಮದುರ್ಗ, ಅಥಣಿ ಹಾಗೂ ರಾಯಬಾಗ ಕ್ಷೇತ್ರಗಳ ನಿರ್ದೇಶಕರ ಸ್ಥಾನದ ಫಲಿತಾಂಶ ಪ್ರಕಟವಾಗಿತ್ತು. ಹುಕ್ಕೇರಿ, ನಿಪ್ಪಾಣಿ, ಬೈಲಹೊಂಗಲ ಮತ್ತು ಚನ್ನಮ್ಮನ ಕಿತ್ತೂರು ಕ್ಷೇತ್ರಗಳಿಂದ ಗೆದ್ದವರು ಯಾರು, ಸೋತವರು ಯಾರು ಎಂಬುದು ಖಚಿತವಾಗಿದ್ದರೂ, ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ಆಗಿರಲಿಲ್ಲ.</p>.<p>ಈಗ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯದಿಂದ ಆದೇಶ ದೊರೆತ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶ್ರವಣ ನಾಯ್ಕ ಅವರು ಭಾನುವಾರ ಮತ ಎಣಿಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಪ್ರಕಟಿಸಿದರು.</p>.<p>‘ನ್ಯಾಯಾಲಯದ ಆದೇಶದಂತೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲಾಗಿದೆ. ನಿಪ್ಪಾಣಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಸಂಬಂಧಿಸಿ ಚಲಾವಣೆಯಾದ ಮತಗಳಲ್ಲಿ ಏಳು ಮತ ಎಣಿಸದಂತೆ ನ್ಯಾಯಾಲಯದ ಸೂಚನೆ ಇತ್ತು. ಹಾಗಾಗಿ ಏಳು ಮತ ಬಿಟ್ಟು ಉಳಿದವನ್ನು ಎಣಿಸಿ ಫಲಿತಾಂಶ ಪ್ರಕಟಿಸಲಾಗಿದೆ’ ಎಂದರು.</p>.<p><strong>ಯಾರಿಗೆ ಎಷ್ಟು ಮತ?:</strong></p>.<p>ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಮೇಶ ಕತ್ತಿ 59 ಮತ ಪಡೆದು ರಾಜೇಂದ್ರ ಪಾಟೀಲ(32 ಮತ) ಅವರನ್ನು ಸೋಲಿಸಿದರೆ, ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ71 ಮತ ಪಡೆದು ಮುಖಂಡ ಉತ್ತಮ ಪಾಟೀಲ(48 ಮತ) ಅವರನ್ನು ಪರಾಭವಗೊಳಿಸಿದರು.</p>.<p>ಬೈಲಹೊಂಗಲ ಕ್ಷೇತ್ರದಲ್ಲಿ ಮಹಾಂತೇಶ ದೊಡ್ಡಗೌಡರ 54 ಮತ ಪಡೆದು ಗೆದ್ದರೆ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ 21 ಮತಗಳನ್ನಷ್ಟೇ ಪಡೆದು ಸೋತರು. ಚನ್ನಮ್ಮನ ಕಿತ್ತೂರು ಕ್ಷೇತ್ರದಲ್ಲಿ ನಾನಾಸಾಹೇಬ ಪಾಟೀಲ ಅವರು 17 ಮತಗಳೊಂದಿಗೆ ಗೆದ್ದರೆ, ವಿಕ್ರಮ ಇನಾಮದಾರ 15 ಮತ ಪಡೆದರು.</p>.<p>ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನ.10ರಂದು ಮಧ್ಯಾಹ್ನ 3ಕ್ಕೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಡಿಸಿಸಿ ಬ್ಯಾಂಕ್ನ ನಾಲ್ಕು ಕ್ಷೇತ್ರಗಳ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಮಾಜಿ ಸಂಸದರಾದ ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮತ್ತು ಮುಖಂಡ ನಾನಾಸಾಹೇಬ ಪಾಟೀಲ ಆಯ್ಕೆಯಾಗಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ನ 16 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆದರೆ, ಏಳು ಸ್ಥಾನಗಳಿಗೆ ಅ.19ರಂದು ಚುನಾವಣೆ ನಡೆದಿತ್ತು.</p>.<p>ಅಂದು ಸಂಜೆಯೇ ರಾಮದುರ್ಗ, ಅಥಣಿ ಹಾಗೂ ರಾಯಬಾಗ ಕ್ಷೇತ್ರಗಳ ನಿರ್ದೇಶಕರ ಸ್ಥಾನದ ಫಲಿತಾಂಶ ಪ್ರಕಟವಾಗಿತ್ತು. ಹುಕ್ಕೇರಿ, ನಿಪ್ಪಾಣಿ, ಬೈಲಹೊಂಗಲ ಮತ್ತು ಚನ್ನಮ್ಮನ ಕಿತ್ತೂರು ಕ್ಷೇತ್ರಗಳಿಂದ ಗೆದ್ದವರು ಯಾರು, ಸೋತವರು ಯಾರು ಎಂಬುದು ಖಚಿತವಾಗಿದ್ದರೂ, ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ಆಗಿರಲಿಲ್ಲ.</p>.<p>ಈಗ ಫಲಿತಾಂಶ ಪ್ರಕಟಣೆಗೆ ನ್ಯಾಯಾಲಯದಿಂದ ಆದೇಶ ದೊರೆತ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಶ್ರವಣ ನಾಯ್ಕ ಅವರು ಭಾನುವಾರ ಮತ ಎಣಿಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಪ್ರಕಟಿಸಿದರು.</p>.<p>‘ನ್ಯಾಯಾಲಯದ ಆದೇಶದಂತೆ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲಾಗಿದೆ. ನಿಪ್ಪಾಣಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಸಂಬಂಧಿಸಿ ಚಲಾವಣೆಯಾದ ಮತಗಳಲ್ಲಿ ಏಳು ಮತ ಎಣಿಸದಂತೆ ನ್ಯಾಯಾಲಯದ ಸೂಚನೆ ಇತ್ತು. ಹಾಗಾಗಿ ಏಳು ಮತ ಬಿಟ್ಟು ಉಳಿದವನ್ನು ಎಣಿಸಿ ಫಲಿತಾಂಶ ಪ್ರಕಟಿಸಲಾಗಿದೆ’ ಎಂದರು.</p>.<p><strong>ಯಾರಿಗೆ ಎಷ್ಟು ಮತ?:</strong></p>.<p>ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಮೇಶ ಕತ್ತಿ 59 ಮತ ಪಡೆದು ರಾಜೇಂದ್ರ ಪಾಟೀಲ(32 ಮತ) ಅವರನ್ನು ಸೋಲಿಸಿದರೆ, ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಸಾಹೇಬ ಜೊಲ್ಲೆ71 ಮತ ಪಡೆದು ಮುಖಂಡ ಉತ್ತಮ ಪಾಟೀಲ(48 ಮತ) ಅವರನ್ನು ಪರಾಭವಗೊಳಿಸಿದರು.</p>.<p>ಬೈಲಹೊಂಗಲ ಕ್ಷೇತ್ರದಲ್ಲಿ ಮಹಾಂತೇಶ ದೊಡ್ಡಗೌಡರ 54 ಮತ ಪಡೆದು ಗೆದ್ದರೆ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ 21 ಮತಗಳನ್ನಷ್ಟೇ ಪಡೆದು ಸೋತರು. ಚನ್ನಮ್ಮನ ಕಿತ್ತೂರು ಕ್ಷೇತ್ರದಲ್ಲಿ ನಾನಾಸಾಹೇಬ ಪಾಟೀಲ ಅವರು 17 ಮತಗಳೊಂದಿಗೆ ಗೆದ್ದರೆ, ವಿಕ್ರಮ ಇನಾಮದಾರ 15 ಮತ ಪಡೆದರು.</p>.<p>ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನ.10ರಂದು ಮಧ್ಯಾಹ್ನ 3ಕ್ಕೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>