ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್ಪಿ ಲಕ್ಷ್ಮಣ ನಿಂಬರಗಿ ತನಿಖೆಗಾಗಿ 4 ತಂಡಗಳನ್ನು ರಚಿಸಿದ್ದರು. ಎಸ್ಪಿ ಮಾರ್ಗದರ್ಶನ, ಹೆಚ್ಚುವರಿ ಎಸ್ಪಿ ಮಹಾಲಿಂಗ ನಂದಗಾವಿ ಹಾಗೂ ರಾಮದುರ್ಗ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದಲ್ಲಿ ಸಿಪಿಐಗಳಾದ ಮೌನೇಶ್ವರ ಮಾಲಿಪಾಟೀಲ, ಯು.ಎಸ್. ಸಾತೇನಹಳ್ಳಿ, ವೀರೇಶ ದೊಡಮನಿ, ಪಿಎಸ್ಐ ಪ್ರವೀಣ ಗಂಗೋಳ, ಶಿವಾನಂದ ಗುಡಗನಟ್ಟಿ, ಶಿವಾನಂದ ಕಾರಜೋಳ, ಬಸಗೌಡ ನೇರ್ಲಿ, ಚಾಂದಬೀ ಗಂಗಾವತಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.