<p><strong>ಬೆಳಗಾವಿ:</strong> ‘ಜಿಲ್ಲಾಸ್ಪತ್ರೆ (ಬಿಮ್ಸ್)ಯಲ್ಲಿ ಆಂತರಿಕವಾಗಿ ಯಾವುದೇ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ನಾಲ್ಕೈದು ದಿನಗಳಲ್ಲಿ ಬಗೆಹರಿಸಿಕೊಂಡು ಜನರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಪರಿಸ್ಥಿತಿ ಸುಧಾರಣೆ ಆಗದಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೇರೆ ಜಿಲ್ಲೆಗಳಲ್ಲಿರುವ ಜಿಲ್ಲಾಸ್ಪತ್ರೆಗಳಿಗೆ ಹೋಲಿಸಿದರೆ ಇಲ್ಲಿ ಸಮರ್ಪಕ ನಿರ್ವಹಣೆ ಇಲ್ಲ. ಐಸಿಯು ಕೂಡ ನಿರ್ವಹಿಸುತ್ತಿಲ್ಲ. ವಾರ್ಡ್ ಮತ್ತು ಐಸಿಯುಗಳಲ್ಲಿ ಸ್ವಚ್ಛತೆ ನಿರ್ಲಕ್ಷಿಸಲಾಗಿದೆ. ಕೋವಿಡ್ನಿಂದ ಸಾವು-ಬದುಕಿನ ಮಧ್ಯೆ ಸೆಣಸಾಡುತ್ತಿರುವ ಜನರು ಬಿಮ್ಸ್ಗೆ ದಾಖಲಾಗುತ್ತಾರೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಅವರ ಶಾಪ ನಮ್ಮೆಲ್ಲರಿಗೂ ತಟ್ಟುತ್ತದೆ. ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಸರಿಯಾದ ಚಿಕಿತ್ಸೆ ನೀಡದಿದ್ದರೆ ಏನು ಪ್ರಯೋಜನ?’ ಎಂದು ತರಾಟೆಗೆ ತೆಗೆದುಕೊಂಡರು.</p>.<p>‘ಪಕ್ಕದಲ್ಲಿಯೇ ಮೃತದೇಹ ಇಟ್ಟರೆ, ರೋಗಿಗಳ ಗತಿ ಏನು’ ಎಂದು ಖಾರವಾಗಿ ಪ್ರಶ್ನಿಸಿದರು. ‘ಮೃತದೇಹವನ್ನು ತಕ್ಷಣವೇ ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.</p>.<p>‘ಪ್ರತಿ ದಿನ ಮೂರು ಪಾಳಿಗಳ ಆಧಾರದ ಮೇಲೆ ವೈದ್ಯರು, ಇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು. ಎಲ್ಲ ವಾರ್ಡ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.</p>.<p>‘ಬಿಮ್ಸ್ ಬೇಡಿಕೆಗೆ ಅನುಗುಣವಾಗಿ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಸಿಬ್ಬಂದಿಯನ್ನು ಜಿಲ್ಲಾಡಳಿತದಿಂದ ಒದಗಿಸಲಾಗಿದೆ. ಆದಾಗ್ಯೂ ಕೋವಿಡ್ ವಾರ್ಡ್ಗಳಲ್ಲಿ ಸೋಂಕಿತರ ಸಹಾಯಕರು ಕಂಡುಬರುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.</p>.<p>‘ಹಳೆ ವಾರ್ಡ್ಗಳಲ್ಲಿ ಮಾತ್ರ ಸ್ವಚ್ಛತೆ ಸಮಸ್ಯೆ ಇದೆ. ಆದರೆ, ದೂರವಿರುವ ಹೊಸ ವಾರ್ಡ್ಗಳಲ್ಲಿ ಸ್ವಚ್ಛತೆ ಸಮಸ್ಯೆ ಇಲ್ಲ’ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲಾಸ್ಪತ್ರೆ (ಬಿಮ್ಸ್)ಯಲ್ಲಿ ಆಂತರಿಕವಾಗಿ ಯಾವುದೇ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ನಾಲ್ಕೈದು ದಿನಗಳಲ್ಲಿ ಬಗೆಹರಿಸಿಕೊಂಡು ಜನರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಪರಿಸ್ಥಿತಿ ಸುಧಾರಣೆ ಆಗದಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೇರೆ ಜಿಲ್ಲೆಗಳಲ್ಲಿರುವ ಜಿಲ್ಲಾಸ್ಪತ್ರೆಗಳಿಗೆ ಹೋಲಿಸಿದರೆ ಇಲ್ಲಿ ಸಮರ್ಪಕ ನಿರ್ವಹಣೆ ಇಲ್ಲ. ಐಸಿಯು ಕೂಡ ನಿರ್ವಹಿಸುತ್ತಿಲ್ಲ. ವಾರ್ಡ್ ಮತ್ತು ಐಸಿಯುಗಳಲ್ಲಿ ಸ್ವಚ್ಛತೆ ನಿರ್ಲಕ್ಷಿಸಲಾಗಿದೆ. ಕೋವಿಡ್ನಿಂದ ಸಾವು-ಬದುಕಿನ ಮಧ್ಯೆ ಸೆಣಸಾಡುತ್ತಿರುವ ಜನರು ಬಿಮ್ಸ್ಗೆ ದಾಖಲಾಗುತ್ತಾರೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಅವರ ಶಾಪ ನಮ್ಮೆಲ್ಲರಿಗೂ ತಟ್ಟುತ್ತದೆ. ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಸರಿಯಾದ ಚಿಕಿತ್ಸೆ ನೀಡದಿದ್ದರೆ ಏನು ಪ್ರಯೋಜನ?’ ಎಂದು ತರಾಟೆಗೆ ತೆಗೆದುಕೊಂಡರು.</p>.<p>‘ಪಕ್ಕದಲ್ಲಿಯೇ ಮೃತದೇಹ ಇಟ್ಟರೆ, ರೋಗಿಗಳ ಗತಿ ಏನು’ ಎಂದು ಖಾರವಾಗಿ ಪ್ರಶ್ನಿಸಿದರು. ‘ಮೃತದೇಹವನ್ನು ತಕ್ಷಣವೇ ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.</p>.<p>‘ಪ್ರತಿ ದಿನ ಮೂರು ಪಾಳಿಗಳ ಆಧಾರದ ಮೇಲೆ ವೈದ್ಯರು, ಇತರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು. ಎಲ್ಲ ವಾರ್ಡ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.</p>.<p>‘ಬಿಮ್ಸ್ ಬೇಡಿಕೆಗೆ ಅನುಗುಣವಾಗಿ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಸಿಬ್ಬಂದಿಯನ್ನು ಜಿಲ್ಲಾಡಳಿತದಿಂದ ಒದಗಿಸಲಾಗಿದೆ. ಆದಾಗ್ಯೂ ಕೋವಿಡ್ ವಾರ್ಡ್ಗಳಲ್ಲಿ ಸೋಂಕಿತರ ಸಹಾಯಕರು ಕಂಡುಬರುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.</p>.<p>‘ಹಳೆ ವಾರ್ಡ್ಗಳಲ್ಲಿ ಮಾತ್ರ ಸ್ವಚ್ಛತೆ ಸಮಸ್ಯೆ ಇದೆ. ಆದರೆ, ದೂರವಿರುವ ಹೊಸ ವಾರ್ಡ್ಗಳಲ್ಲಿ ಸ್ವಚ್ಛತೆ ಸಮಸ್ಯೆ ಇಲ್ಲ’ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>