ಅಥಣಿ (ಬೆಳಗಾವಿ ಜಿಲ್ಲೆ): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ (36) ಕೋವಿಡ್ ನಿಂದ ಬುಧವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಚಿಕಿತ್ಸೆಗೆ ಸ್ಪಂದಿಸದೇ ವಿನೋದ ಸವದಿ ಅವರು ಬುಧವಾರದಂದು ಕೊನೆಯುಸಿರೆಳೆದಿದ್ದಾರೆ.