<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ತಾಲ್ಲೂಕಿನ ಹಲ್ಯಾಳ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ನಾಲ್ವರು ಸಹೋದರರ ಕುಟುಂಬದವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶನಿವಾರ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ₹ 2 ಲಕ್ಷ ನೆರವು ನೀಡಿದರು.</p>.<p>ತಮ್ಮವರನ್ನು ಕಳೆದುಕೊಂಡಿರುವ ಬನಸೋಡೆ ಕುಟುಂಬದವರಿಗೆ ಧೈರ್ಯ ತುಂಬಿದರು.</p>.<p>ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದುರಂತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೆ. ಎನ್ಡಿಆರ್ಎಫ್ನವರು ಸೇರಿದಂತೆ ಹಲವರು ಜೊತೆಗೂಡಿ ಕಾರ್ಯಾಚರಣೆ ನಡೆಸಿದರೂ ಆ ಸಹೋದರರನ್ನು ಜೀವಂತವಾಗಿ ರಕ್ಷಿಸುವ ನಮ್ಮ ಪ್ರಯತ್ನ ವಿಫಲವಾಯಿತು. ಶಾಸಕರು ಮತ್ತು ನಾನು ಸೇರಿ ಸರ್ಕಾರದಿಂದ ಸೌಲಭ್ಯ ಮತ್ತು ಪರಿಹಾರ ಕೊಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ಈ ಕುಟುಂಬದವರ ಜೀವನ ನಿರ್ವಹಣೆಗೆ ನಾನೂ ವೈಯಕ್ತಿಕವಾಗಿ ₹ 1 ಲಕ್ಷ ನೀಡಿದ್ದೇನೆ’ ಎಂದರು.</p>.<p>ಮುಖಂಡರಾದ ಯಲ್ಲಾಲಿಂಗ ಪಾಟೀಲ, ಸುರೇಶ ವಾಡೇದ, ಚಂದ್ರಕಾಂತ ಕಾಗವಾಡ, ಮಹಾದೇವ ಜಾಬಗೌಡ, ಅಣ್ಣಪ್ಪ ಬಾಗಿ, ಗ್ರಾ.ಪಂ. ಅಧ್ಯಕ್ಷ ಪರಪ್ಪ ಶೇಗುಣಶಿ, ಮಹಾಂತೇಶ ಇಂಗಳಿ, ಸದಾಶಿವ ಬನಸೋಡೆ, ತಹಶೀಲ್ದಾರ್ ದುಂಡಪ್ಪ ಕೋಮಾರ, ಡಿವೈಎಸ್ಪಿ ಎಸ್.ವಿ. ಗಿರೀಶ, ತಾ.ಪಂ. ಇಒ ರವೀಂದ್ರ ಬಂಗಾರೆಪ್ಪನವರ, ಸಮಾಜ ಕಲ್ಯಾಣಾಧಿಕಾರಿ ಪ್ರವೀಣ ಪಾಟೀಲ, ಟಿಎಚ್ಒ ಡಾ.ಬಸಗೌಡ ಕಾಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ (ಬೆಳಗಾವಿ ಜಿಲ್ಲೆ): </strong>ತಾಲ್ಲೂಕಿನ ಹಲ್ಯಾಳ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ನಾಲ್ವರು ಸಹೋದರರ ಕುಟುಂಬದವರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಶನಿವಾರ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ₹ 2 ಲಕ್ಷ ನೆರವು ನೀಡಿದರು.</p>.<p>ತಮ್ಮವರನ್ನು ಕಳೆದುಕೊಂಡಿರುವ ಬನಸೋಡೆ ಕುಟುಂಬದವರಿಗೆ ಧೈರ್ಯ ತುಂಬಿದರು.</p>.<p>ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದುರಂತದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೆ. ಎನ್ಡಿಆರ್ಎಫ್ನವರು ಸೇರಿದಂತೆ ಹಲವರು ಜೊತೆಗೂಡಿ ಕಾರ್ಯಾಚರಣೆ ನಡೆಸಿದರೂ ಆ ಸಹೋದರರನ್ನು ಜೀವಂತವಾಗಿ ರಕ್ಷಿಸುವ ನಮ್ಮ ಪ್ರಯತ್ನ ವಿಫಲವಾಯಿತು. ಶಾಸಕರು ಮತ್ತು ನಾನು ಸೇರಿ ಸರ್ಕಾರದಿಂದ ಸೌಲಭ್ಯ ಮತ್ತು ಪರಿಹಾರ ಕೊಡಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಶಾಸಕ ಮಹೇಶ ಕುಮಠಳ್ಳಿ, ‘ಈ ಕುಟುಂಬದವರ ಜೀವನ ನಿರ್ವಹಣೆಗೆ ನಾನೂ ವೈಯಕ್ತಿಕವಾಗಿ ₹ 1 ಲಕ್ಷ ನೀಡಿದ್ದೇನೆ’ ಎಂದರು.</p>.<p>ಮುಖಂಡರಾದ ಯಲ್ಲಾಲಿಂಗ ಪಾಟೀಲ, ಸುರೇಶ ವಾಡೇದ, ಚಂದ್ರಕಾಂತ ಕಾಗವಾಡ, ಮಹಾದೇವ ಜಾಬಗೌಡ, ಅಣ್ಣಪ್ಪ ಬಾಗಿ, ಗ್ರಾ.ಪಂ. ಅಧ್ಯಕ್ಷ ಪರಪ್ಪ ಶೇಗುಣಶಿ, ಮಹಾಂತೇಶ ಇಂಗಳಿ, ಸದಾಶಿವ ಬನಸೋಡೆ, ತಹಶೀಲ್ದಾರ್ ದುಂಡಪ್ಪ ಕೋಮಾರ, ಡಿವೈಎಸ್ಪಿ ಎಸ್.ವಿ. ಗಿರೀಶ, ತಾ.ಪಂ. ಇಒ ರವೀಂದ್ರ ಬಂಗಾರೆಪ್ಪನವರ, ಸಮಾಜ ಕಲ್ಯಾಣಾಧಿಕಾರಿ ಪ್ರವೀಣ ಪಾಟೀಲ, ಟಿಎಚ್ಒ ಡಾ.ಬಸಗೌಡ ಕಾಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>