<p><strong>ಬೆಳಗಾವಿ: </strong>‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಟೀಕಿಸಿದರು.</p>.<p>ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಮ್ಮ ಅಧಿಕಾರದ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ಇತ್ತು. ಆದರೆ, ಅದನ್ನು ನಿಭಾಯಿಸಲು ಅಸಮರ್ಥನಾಗಿದ್ದೆ ಎಂದು ಅವರೇ ಹೇಳಿಕೊಂಡಂತಾಗಿದೆ’ ಎಂದು ಕುಟುಕಿದರು.</p>.<p>‘ಹಾಗೇನಾದರೂ ಆಗಿದ್ದರೆ ಒಂದು ವರ್ಷದಿಂದ ಬಾಯಿ ಮುಚ್ಚಿಕೊಂಡಿದ್ದರೇಕೆ? ಎಂದು ಕೇಳಿದರು.</p>.<p>‘ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಸರ್ಕಾರ ಸಿದ್ಧವಿದೆ. ತನಿಖೆಯಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಗೃಹ ಸಚಿವರು ಆಸಕ್ತಿ ವಹಿಸಿ ನಿಗಾ ಇಟ್ಟಿದ್ದಾರೆ. ಈ ಬಗ್ಗೆ ಜನರಿಗೆ ಸಂದೇಹ ಬೇಡ. ರಾಜಕಾರಣಿಗಳ ಮಕ್ಕಳೋ, ಅಧಿಕಾರಿಗಳ ಮಕ್ಕಳೋ ಯಾರೇ ಇದ್ದರೂ ಕ್ರಮವಾಗಲಿದೆ. ಮಾದಕ ವಸ್ತುಗಳ ಜಾಲದಿಂದ ರಾಜ್ಯದ ಯಾವುದೇ ಜಿಲ್ಲೆಯೂ ಹೊರತಾಗಿಲ್ಲ. ಎಲ್ಲವನ್ನೂ ಪತ್ತೆ ಮಾಡಲು ಗೃಹ ಇಲಾಖೆ ಕ್ರಮ ಕೈಗೊಂಡಿದೆ’ ಎಂದರು.</p>.<p>‘ರಾಗಿಣಿ ಪಾಗಿಣಿ ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ಚುನಾವಣೆ ವೇಳೆ ಚಲನಚಿತ್ರ ನಟ–ನಟಿಯರು ಪ್ರಚಾರಕ್ಕೆ ಬರುತ್ತಾರೆ. ಈಗ ಬಂಧಿತರಾಗಿರುವ ರಾಗಿಣಿ ಹಾಗೂ ಸಂಜನಾ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ತೆಗೆಸಿಕೊಂಡಿರುವ ಫೋಟೊಗಳು ಕೂಡ ಹರಿದಾಡುತ್ತಿವೆ. ಆ ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ಇದ್ದರೆಂದು ಆ ನಾಯಕರಿಗೆ ಗೊತ್ತಿರುವುದಿಲ್ಲ. ನಮಗೂ ಗೊತ್ತಿರಲಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಾಕರ್ಷಣೆಗೆ ಅವರನ್ನು ಬಳಸಿಕೊಂಡಿರುತ್ತಾರೆ. ಅವರ ನಿಜ ಬಣ್ಣ ಈಗ ಬಯಲಾಗಿದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಉಮೇಶ ಕತ್ತಿ ನಮ್ಮ ಸ್ನೇಹಿತರು. ಅವರು ಸಂಪುಟ ಸೇರಿದರೆ ನಮಗೂ ಖುಷಿಯೇ. ಆದರೆ, ಯಾವಾಗ ವಿಸ್ತರಣೆ ಆಗುತ್ತದೆ ಎನ್ನುವುದು ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಟೀಕಿಸಿದರು.</p>.<p>ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಮ್ಮ ಅಧಿಕಾರದ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ಇತ್ತು. ಆದರೆ, ಅದನ್ನು ನಿಭಾಯಿಸಲು ಅಸಮರ್ಥನಾಗಿದ್ದೆ ಎಂದು ಅವರೇ ಹೇಳಿಕೊಂಡಂತಾಗಿದೆ’ ಎಂದು ಕುಟುಕಿದರು.</p>.<p>‘ಹಾಗೇನಾದರೂ ಆಗಿದ್ದರೆ ಒಂದು ವರ್ಷದಿಂದ ಬಾಯಿ ಮುಚ್ಚಿಕೊಂಡಿದ್ದರೇಕೆ? ಎಂದು ಕೇಳಿದರು.</p>.<p>‘ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಸರ್ಕಾರ ಸಿದ್ಧವಿದೆ. ತನಿಖೆಯಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಗೃಹ ಸಚಿವರು ಆಸಕ್ತಿ ವಹಿಸಿ ನಿಗಾ ಇಟ್ಟಿದ್ದಾರೆ. ಈ ಬಗ್ಗೆ ಜನರಿಗೆ ಸಂದೇಹ ಬೇಡ. ರಾಜಕಾರಣಿಗಳ ಮಕ್ಕಳೋ, ಅಧಿಕಾರಿಗಳ ಮಕ್ಕಳೋ ಯಾರೇ ಇದ್ದರೂ ಕ್ರಮವಾಗಲಿದೆ. ಮಾದಕ ವಸ್ತುಗಳ ಜಾಲದಿಂದ ರಾಜ್ಯದ ಯಾವುದೇ ಜಿಲ್ಲೆಯೂ ಹೊರತಾಗಿಲ್ಲ. ಎಲ್ಲವನ್ನೂ ಪತ್ತೆ ಮಾಡಲು ಗೃಹ ಇಲಾಖೆ ಕ್ರಮ ಕೈಗೊಂಡಿದೆ’ ಎಂದರು.</p>.<p>‘ರಾಗಿಣಿ ಪಾಗಿಣಿ ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ಚುನಾವಣೆ ವೇಳೆ ಚಲನಚಿತ್ರ ನಟ–ನಟಿಯರು ಪ್ರಚಾರಕ್ಕೆ ಬರುತ್ತಾರೆ. ಈಗ ಬಂಧಿತರಾಗಿರುವ ರಾಗಿಣಿ ಹಾಗೂ ಸಂಜನಾ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ತೆಗೆಸಿಕೊಂಡಿರುವ ಫೋಟೊಗಳು ಕೂಡ ಹರಿದಾಡುತ್ತಿವೆ. ಆ ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ಇದ್ದರೆಂದು ಆ ನಾಯಕರಿಗೆ ಗೊತ್ತಿರುವುದಿಲ್ಲ. ನಮಗೂ ಗೊತ್ತಿರಲಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಾಕರ್ಷಣೆಗೆ ಅವರನ್ನು ಬಳಸಿಕೊಂಡಿರುತ್ತಾರೆ. ಅವರ ನಿಜ ಬಣ್ಣ ಈಗ ಬಯಲಾಗಿದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಉಮೇಶ ಕತ್ತಿ ನಮ್ಮ ಸ್ನೇಹಿತರು. ಅವರು ಸಂಪುಟ ಸೇರಿದರೆ ನಮಗೂ ಖುಷಿಯೇ. ಆದರೆ, ಯಾವಾಗ ವಿಸ್ತರಣೆ ಆಗುತ್ತದೆ ಎನ್ನುವುದು ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>