ಬಸವಕಲ್ಯಾಣ ಉಪ ಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್ಮ್ಯಾನ್ಗೂ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.