ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲೂ ಹಬ್ಬಿದೆ. ಸಂಸದರು ಹಾಗೂ ಶಾಸಕರ ಎದುರೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಯಾವುದೆ ಚುನಾಯಿತ ಪ್ರತಿನಿಧಿ ಅಲ್ಲದವರನ್ನು ವೇದಿಕೆ ಮೇಲೆ ಕೂರಲು ಅವಕಾಶ ಕೊಟ್ಟಿರುವುದು ಸರಿಯಲ್ಲ ಎನ್ನುವ ವಿರೋಧ ವ್ಯಕ್ತವಾಗಿದೆ. ತಾಲ್ಲೂಕು ದಂಡಾಧಿಕಾರಿ ವೇದಿಕೆ ಮುಂದೆ ಕುಳಿತಿದ್ದರು! ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯೂ ವೇದಿಕೆಯಲ್ಲಿರಲಿಲ್ಲ. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಅದು ಅಧಿಕಾರಿಗಳ ಸಭೆಯೋ, ಬಿಜೆಪಿಯದ್ದೋ ಎಂದು ಹಲವರು ಪ್ರಶ್ನಿಸಿದ್ದಾರೆ.