ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಪ್ರತಿನಿಧಿಗಳಿಗೆ ದಿನಸಿ ಕಿಟ್ ವಿತರಣೆ

Last Updated 28 ಜೂನ್ 2021, 12:48 IST
ಅಕ್ಷರ ಗಾತ್ರ

ಬೆಳಗಾವಿ: ‘ಸಂಕಷ್ಟದಲ್ಲಿರುವವರಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸರ್ಕಾರದಿಂದ ಮತ್ತು ವೈಯಕ್ತಿಕವಾಗಿ ಕೂಡ ಸಹಾಯ ಮಾಡುತ್ತಾ ಬಂದಿದ್ದಾರೆ’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ದಿನಸಿ ಕಿಟ್‌ಗಳನ್ನು ಇಲ್ಲಿನ ವಾರ್ತಾಭವನದಲ್ಲಿ ಸೋಮವಾರ ವಿತರಿಸಿ ಅವರು ಮಾತನಾಡಿದರು.

‘ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರಿಗೆ ತಮ್ಮ ಕುಟುಂಬದ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ನೆರವು ನೀಡುತ್ತಾ, ಜನಪರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅಥಣಿ, ಬೆಂಗಳೂರು, ಬೆಳಗಾವಿ ರಾಯಚೂರು ಸೇರಿದಂತೆ ವಿವಿಧೆಡೆ ಕಷ್ಟದಲ್ಲಿದ್ದ ಜನರಿಗೆ ಹಾಗೂ ಪತ್ರಕರ್ತರಿಗೆ ಅವರು ನೆರವಾಗಿದ್ದಾರೆ’ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖಂಡ ಶಶಿಕಾಂತ ಸವದಿ, ‘ಕೋವಿಡ್ ಸಂಕಷ್ಟ ಕಾಲದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ಸಾಧ್ಯವಾದಷ್ಟು ನಿಸ್ವಾರ್ಥ ಜನ ಸೇವೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಮುಖಂಡ ಮಹಾಂತೇಶ ವಕ್ಕುಂದ, ‘ಅಥಣಿಯಲ್ಲಿ ಸತ್ಯ ಸಂಗಮ ಪ್ರತಿಷ್ಠಾನದಿಂದ ಸತತ 26 ದಿನಗಳವರೆಗೆ ದಿನಸಿ ಕಿಟ್‌ಗಳನ್ನು ಈ ಟ್ರಸ್ಟ್ ವಿತರಿಸಿದೆ. ತಿಂಗಳಿಗೆ ಆಗುವಷ್ಟು ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡಲಾಗಿದೆ. ಇದು ಅಭಿನಂದನಾರ್ಹ’ ಎಂದರು.

200 ಮಂದಿಗೆ ಕಿಟ್‌ಗಳನ್ನು ವಿತರಿಸಲಾಯಿತು. ಸಂತೋಷ ಸಾವಡ್ಕರ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT