<p><strong>ಬೆಳಗಾವಿ</strong>: ‘ಸಂಕಷ್ಟದಲ್ಲಿರುವವರಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸರ್ಕಾರದಿಂದ ಮತ್ತು ವೈಯಕ್ತಿಕವಾಗಿ ಕೂಡ ಸಹಾಯ ಮಾಡುತ್ತಾ ಬಂದಿದ್ದಾರೆ’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು.</p>.<p>ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ದಿನಸಿ ಕಿಟ್ಗಳನ್ನು ಇಲ್ಲಿನ ವಾರ್ತಾಭವನದಲ್ಲಿ ಸೋಮವಾರ ವಿತರಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರಿಗೆ ತಮ್ಮ ಕುಟುಂಬದ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ನೆರವು ನೀಡುತ್ತಾ, ಜನಪರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅಥಣಿ, ಬೆಂಗಳೂರು, ಬೆಳಗಾವಿ ರಾಯಚೂರು ಸೇರಿದಂತೆ ವಿವಿಧೆಡೆ ಕಷ್ಟದಲ್ಲಿದ್ದ ಜನರಿಗೆ ಹಾಗೂ ಪತ್ರಕರ್ತರಿಗೆ ಅವರು ನೆರವಾಗಿದ್ದಾರೆ’ ಎಂದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖಂಡ ಶಶಿಕಾಂತ ಸವದಿ, ‘ಕೋವಿಡ್ ಸಂಕಷ್ಟ ಕಾಲದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ಸಾಧ್ಯವಾದಷ್ಟು ನಿಸ್ವಾರ್ಥ ಜನ ಸೇವೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಮುಖಂಡ ಮಹಾಂತೇಶ ವಕ್ಕುಂದ, ‘ಅಥಣಿಯಲ್ಲಿ ಸತ್ಯ ಸಂಗಮ ಪ್ರತಿಷ್ಠಾನದಿಂದ ಸತತ 26 ದಿನಗಳವರೆಗೆ ದಿನಸಿ ಕಿಟ್ಗಳನ್ನು ಈ ಟ್ರಸ್ಟ್ ವಿತರಿಸಿದೆ. ತಿಂಗಳಿಗೆ ಆಗುವಷ್ಟು ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡಲಾಗಿದೆ. ಇದು ಅಭಿನಂದನಾರ್ಹ’ ಎಂದರು.</p>.<p>200 ಮಂದಿಗೆ ಕಿಟ್ಗಳನ್ನು ವಿತರಿಸಲಾಯಿತು. ಸಂತೋಷ ಸಾವಡ್ಕರ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಸಂಕಷ್ಟದಲ್ಲಿರುವವರಿಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸರ್ಕಾರದಿಂದ ಮತ್ತು ವೈಯಕ್ತಿಕವಾಗಿ ಕೂಡ ಸಹಾಯ ಮಾಡುತ್ತಾ ಬಂದಿದ್ದಾರೆ’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು.</p>.<p>ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ದಿನಸಿ ಕಿಟ್ಗಳನ್ನು ಇಲ್ಲಿನ ವಾರ್ತಾಭವನದಲ್ಲಿ ಸೋಮವಾರ ವಿತರಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರಿಗೆ ತಮ್ಮ ಕುಟುಂಬದ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ನೆರವು ನೀಡುತ್ತಾ, ಜನಪರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅಥಣಿ, ಬೆಂಗಳೂರು, ಬೆಳಗಾವಿ ರಾಯಚೂರು ಸೇರಿದಂತೆ ವಿವಿಧೆಡೆ ಕಷ್ಟದಲ್ಲಿದ್ದ ಜನರಿಗೆ ಹಾಗೂ ಪತ್ರಕರ್ತರಿಗೆ ಅವರು ನೆರವಾಗಿದ್ದಾರೆ’ ಎಂದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖಂಡ ಶಶಿಕಾಂತ ಸವದಿ, ‘ಕೋವಿಡ್ ಸಂಕಷ್ಟ ಕಾಲದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ ಪ್ರತಿಷ್ಠಾನದಿಂದ ಸಾಧ್ಯವಾದಷ್ಟು ನಿಸ್ವಾರ್ಥ ಜನ ಸೇವೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಮುಖಂಡ ಮಹಾಂತೇಶ ವಕ್ಕುಂದ, ‘ಅಥಣಿಯಲ್ಲಿ ಸತ್ಯ ಸಂಗಮ ಪ್ರತಿಷ್ಠಾನದಿಂದ ಸತತ 26 ದಿನಗಳವರೆಗೆ ದಿನಸಿ ಕಿಟ್ಗಳನ್ನು ಈ ಟ್ರಸ್ಟ್ ವಿತರಿಸಿದೆ. ತಿಂಗಳಿಗೆ ಆಗುವಷ್ಟು ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡಲಾಗಿದೆ. ಇದು ಅಭಿನಂದನಾರ್ಹ’ ಎಂದರು.</p>.<p>200 ಮಂದಿಗೆ ಕಿಟ್ಗಳನ್ನು ವಿತರಿಸಲಾಯಿತು. ಸಂತೋಷ ಸಾವಡ್ಕರ ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>