‘ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಅವಕಾಶವಿದ್ದರೆ ನಿಯಮಾವಳಿಯ ಪ್ರತಿ ನೀಡುವಂತೆ 2019ರ ಡಿ.14ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಅರ್ಜಿ ಸಲ್ಲಿಸಿದ್ದೆ. ಆದರೆ, ವರ್ಷದಿಂದಲೂ ಉತ್ತರ ಕೊಟ್ಟಿಲ್ಲ. ಆ ಇಲಾಖೆಗೆ, ಈ ಇಲಾಖೆಗೆ ಸಂಬಂಧಿಸಿದ್ದಿದು ಎಂದು ನುಣುಚಿಕೊಳ್ಳಲಾಗುತ್ತಿದೆ. ರಾಜಕೀಯ ಒತ್ತಡಕ್ಕೆ ಸಿಲುಕಿ ಅಧಿಕಾರಿಗಳು ಒಬ್ಬರತ್ತ ಇನ್ನೊಬ್ಬರು ಬೆರಳು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಚಿವಾಲಯದಲ್ಲೂ ಈ ಮಾಹಿತಿ ಲಭ್ಯವಿಲ್ಲ. ಸರ್ಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ’ ಎಂದು ಆರೋಪಿಸಿದರು.