<p><strong>ಬೆಳಗಾವಿ:</strong> ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವಿವಿಧ ಕಾಲೇಜುಗಳಿಗೆ ಮಂಗಳವಾರ ಭೇಟಿ ನೀಡಿ, ಆಫ್ಲೈನ್ ತರಗತಿಗೆ ಕೈಗೊಂಡಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ರಾಣಿ ಚನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿದರು. ‘ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿಯೂ ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮಳೆ ಹಾಗೂ ಶೀತ ವಾತಾವರಣದಿಂದ ಕಳೆಗುಂದಿರುವ ಕಾಲೇಜು ಕಟ್ಟಡವನ್ನು ನವೀಕರಿಸಬೇಕು. ಕ್ಯಾಂಟೀನ್ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಪ್ರಾಚಾರ್ಯ ವೈ.ಎನ್.ದೊಡ್ಡಮನಿ ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ ಅವರೊಂದಿಗೆ ಚರ್ಚಿಸಿ, ನವೀಕರಣಕ್ಕೆ ಪ್ರಸ್ತಾವ ಕಳುಹಿಸುವಂತೆ ಸಚಿವರು ಸೂಚಿಸಿದರು.</p>.<p>ಮಹಿಳಾ ಸರ್ಕಾರಿ ಪದವಿ ಕಾಲೇಜಿಗೂ ಭೇಟಿ ನೀಡಿದರು. ‘ಕೋವಿಡ್ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು’ ಎಂದು ತಿಳಿಸಿದರು.</p>.<p>ಆರ್ಸಿಯು ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲಿಸಿದರು. ‘ಕಾಲೇಜಿನ ಪಕ್ಕದಲ್ಲಿರುವ ಜಾಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸುರ, ಕಾಲೇಜಿನ ಪ್ರಾಚಾರ್ಯ ಡಾ.ಎಂ. ಜಯಪ್ಪ, ಉಪಪ್ರಾಚಾರ್ಯ ಅನಿಲ ರಾಮದುರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವಿವಿಧ ಕಾಲೇಜುಗಳಿಗೆ ಮಂಗಳವಾರ ಭೇಟಿ ನೀಡಿ, ಆಫ್ಲೈನ್ ತರಗತಿಗೆ ಕೈಗೊಂಡಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.</p>.<p>ರಾಣಿ ಚನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯೊಂದಿಗೆ ಚರ್ಚಿಸಿದರು. ‘ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿಯೂ ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ವಿಷಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಮಳೆ ಹಾಗೂ ಶೀತ ವಾತಾವರಣದಿಂದ ಕಳೆಗುಂದಿರುವ ಕಾಲೇಜು ಕಟ್ಟಡವನ್ನು ನವೀಕರಿಸಬೇಕು. ಕ್ಯಾಂಟೀನ್ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಪ್ರಾಚಾರ್ಯ ವೈ.ಎನ್.ದೊಡ್ಡಮನಿ ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ ಅವರೊಂದಿಗೆ ಚರ್ಚಿಸಿ, ನವೀಕರಣಕ್ಕೆ ಪ್ರಸ್ತಾವ ಕಳುಹಿಸುವಂತೆ ಸಚಿವರು ಸೂಚಿಸಿದರು.</p>.<p>ಮಹಿಳಾ ಸರ್ಕಾರಿ ಪದವಿ ಕಾಲೇಜಿಗೂ ಭೇಟಿ ನೀಡಿದರು. ‘ಕೋವಿಡ್ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು’ ಎಂದು ತಿಳಿಸಿದರು.</p>.<p>ಆರ್ಸಿಯು ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲಿಸಿದರು. ‘ಕಾಲೇಜಿನ ಪಕ್ಕದಲ್ಲಿರುವ ಜಾಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ಸಿಂಡಿಕೇಟ್ ಸದಸ್ಯ ಡಾ.ಆನಂದ ಹೊಸುರ, ಕಾಲೇಜಿನ ಪ್ರಾಚಾರ್ಯ ಡಾ.ಎಂ. ಜಯಪ್ಪ, ಉಪಪ್ರಾಚಾರ್ಯ ಅನಿಲ ರಾಮದುರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>