ಕೋವಿಡ್ ಕಾರಣದಿಂದಾಗಿ ಆ ಕುಟುಂಬದವರು, ಮುಖವನ್ನು ಸರಿಯಾಗಿ ಗಮನಿಸದೆ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದರು. ಇದಾದ ಕೆಲವು ಗಂಟೆಗಳಲ್ಲಿ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ, ನಿಮ್ಮ ರೋಗಿ ಬದುಕಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದರಿಂದ ಆ ಕುಟುಂಬ ನಿಟ್ಟುಸಿರು ಬಿಡುವ ಜೊತೆಗೆ ಗೊಂದಲಕ್ಕೂ ಒಳಗಾಗಿತ್ತು. ಆಸ್ಪತ್ರೆಯವರ ನಿರ್ಲಕ್ಷ್ಯದ ಬಗ್ಗೆ ಕುಟುಂಬದವರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾಗಾದರೆ, ನಾವು ಅಂತ್ಯಕ್ರಿಯೆ ನೆರವೇರಿಸಿದ್ದು ಯಾರ ಶವ ಎನ್ನುವ ಗೊಂದಲಕ್ಕೆ ಆ ಕುಟುಂಬ ಒಳಗಾಗಿತ್ತು.