‘ಕೊರೊನಾ ಸೋಂಕು ಅಥವಾ ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದವರ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಅಂತ್ಯಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆಂದು ಸಹಾಯವಾಣಿ ರೂಪಿಸಬೇಕು. ನಿರ್ವಹಣೆಗೆ ಅಧಿಕಾರಿ ಒಬ್ಬರನ್ನು ನಿಯೋಜಿಸಬೇಕು ಎಂದು ಆದೇಶಿಸಿದ್ದೇನೆ. ಮಂದಿನ ದಿನಗಳಲ್ಲಿ ಅಮಾನವೀಯ ಘಟನೆಗಳು ನಡೆದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.