<p><strong>ಬೆಳಗಾವಿ</strong>: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ವತಿಯಿಂದ ಬುಧವಾರ ಪಂಡಿತ ದೀನದಯಾಳ ಉಪಾಧ್ಯಾಯ ಅವರ 108ನೇ ಜಯಂತಿ ಆಚರಿಸಲಾಯಿತು.</p>.<p>ಚಲನಚಿತ್ರ ಕಲಾವಿದ ಸುಚೇಂದ್ರಪ್ರಸಾದ, ‘ಪ್ರತಿಯೊಬ್ಬರೂ ನಾಡಿಗೆ ತಮ್ಮದೇಯಾದ ಕೊಡುಗೆ ಸಮರ್ಪಿಸಬೇಕು. ಉತ್ತಮ ನಡೆ–ನುಡಿ ಬೆಳಸಿಕೊಳ್ಳಬೇಕು’ ಎಂದರು.</p>.<p>ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಇಂದು ಯುವಶಕ್ತಿಗೆ ಆರ್ಥಿಕ ಚೈತನ್ಯ ತುಂಬುವ ಕೆಲಸವಾಗಬೇಕಿದೆ. ಶಿಕ್ಷಣವು ಮಾನವತೆಯ ನಿರ್ಮಾಣದೊಂದಿಗೆ, ಬದುಕು ಸೃಷ್ಟಿಸುವ ಶಕ್ತಿಯಾಗಬೇಕು. ಸರ್ವರ ಪಾಲಿನ ಭಾಗ್ಯವಾಗಬೇಕು. ಜತೆಗೆ, ಸರ್ವರಿಗೂ ಭಾಗ್ಯದ ಬಾಗಿಲು ತೆರೆಯಬೇಕು’ ಎಂದರು.</p>.<p>ಕುಲಸಚಿವ ಸಂತೋಷ ಕಾಮಗೌಡ ಮಾತನಾಡಿದರು. </p>.<p>ನಿತೀಶ ಡಂಬಳ ರಚಿಸಿದ ‘ಭಾರತವ ಬೆಳಗಿದ ತೇಜಸ್ಸು’ ಕೃತಿಯನ್ನು ಇದೇವೇಳೆ ಬಿಡುಗಡೆಗೊಳಿಸಲಾಯಿತು. ಕಿರುತೆರೆ ನಟ ಅನಂತ ದೇಶಪಾಂಡೆ ಅವರು, ದ.ರಾ.ಬೇಂದ್ರೆ ದರ್ಶನ ಕುರಿತಾಗಿ ಭಾವಗೀತೆಗಳನ್ನು ಪ್ರಸ್ತುತಪಡಿಸಿದರು. ಪೀಠದ ಸಂಯೋಜಕ ಪ್ರೊ.ಬಿ.ಎಸ್.ನಾವಿ ಸ್ವಾಗತಿಸಿದರು. ಶಿವಲಿಂಗಯ್ಯ ಗೋಠೆ ವಂದಿಸಿದರು. ಗಜಾನನ ನಾಯ್ಕ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ವತಿಯಿಂದ ಬುಧವಾರ ಪಂಡಿತ ದೀನದಯಾಳ ಉಪಾಧ್ಯಾಯ ಅವರ 108ನೇ ಜಯಂತಿ ಆಚರಿಸಲಾಯಿತು.</p>.<p>ಚಲನಚಿತ್ರ ಕಲಾವಿದ ಸುಚೇಂದ್ರಪ್ರಸಾದ, ‘ಪ್ರತಿಯೊಬ್ಬರೂ ನಾಡಿಗೆ ತಮ್ಮದೇಯಾದ ಕೊಡುಗೆ ಸಮರ್ಪಿಸಬೇಕು. ಉತ್ತಮ ನಡೆ–ನುಡಿ ಬೆಳಸಿಕೊಳ್ಳಬೇಕು’ ಎಂದರು.</p>.<p>ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಇಂದು ಯುವಶಕ್ತಿಗೆ ಆರ್ಥಿಕ ಚೈತನ್ಯ ತುಂಬುವ ಕೆಲಸವಾಗಬೇಕಿದೆ. ಶಿಕ್ಷಣವು ಮಾನವತೆಯ ನಿರ್ಮಾಣದೊಂದಿಗೆ, ಬದುಕು ಸೃಷ್ಟಿಸುವ ಶಕ್ತಿಯಾಗಬೇಕು. ಸರ್ವರ ಪಾಲಿನ ಭಾಗ್ಯವಾಗಬೇಕು. ಜತೆಗೆ, ಸರ್ವರಿಗೂ ಭಾಗ್ಯದ ಬಾಗಿಲು ತೆರೆಯಬೇಕು’ ಎಂದರು.</p>.<p>ಕುಲಸಚಿವ ಸಂತೋಷ ಕಾಮಗೌಡ ಮಾತನಾಡಿದರು. </p>.<p>ನಿತೀಶ ಡಂಬಳ ರಚಿಸಿದ ‘ಭಾರತವ ಬೆಳಗಿದ ತೇಜಸ್ಸು’ ಕೃತಿಯನ್ನು ಇದೇವೇಳೆ ಬಿಡುಗಡೆಗೊಳಿಸಲಾಯಿತು. ಕಿರುತೆರೆ ನಟ ಅನಂತ ದೇಶಪಾಂಡೆ ಅವರು, ದ.ರಾ.ಬೇಂದ್ರೆ ದರ್ಶನ ಕುರಿತಾಗಿ ಭಾವಗೀತೆಗಳನ್ನು ಪ್ರಸ್ತುತಪಡಿಸಿದರು. ಪೀಠದ ಸಂಯೋಜಕ ಪ್ರೊ.ಬಿ.ಎಸ್.ನಾವಿ ಸ್ವಾಗತಿಸಿದರು. ಶಿವಲಿಂಗಯ್ಯ ಗೋಠೆ ವಂದಿಸಿದರು. ಗಜಾನನ ನಾಯ್ಕ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>